ಬೆಂಗಳೂರು: ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ದುಷ್ಕರ್ಮಿ ಪರಾರಿ!

Date:

ಬೆಂಗಳೂರು : ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿರುವಂತಹ ಘಟನೆ ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಡೆದಿದೆ. ಸಲ್ಮಾ(35) ಎಂಬ ಮಹಿಳೆಯನ್ನು ಪ್ರಿಯಕರ ಸುಬ್ಬುಮಣಿ ಕೊಂದು ಆಟೋದಲ್ಲಿ ಮೃತದೇಹ ಇಟ್ಟಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡು ತಿಲಕ್ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಿಲಕ್ನಗರ ಠಾಣಾ ವ್ಯಾಪ್ತಿಯಲ್ಲಿ ಸುಬ್ಬುಮಣಿ ವಾಸವಿದ್ದ. ಪತಿ ಮೃತಪಟ್ಟ ನಂತರ ಸುಬ್ಬುಮಣಿ ಜೊತೆ ಸಲ್ಮಾ ಸಲುಗೆಯಿಂದ ಇದ್ದರು. ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುಬ್ಬುಮಣಿ, ಸಲ್ಮಾ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಸಲ್ಮಾ ಮೃತದೇಹಕ್ಕೆ ಬಟ್ಟೆಸುತ್ತಿ ಕೆಟ್ಟುನಿಂತಿದ್ದ ಆಟೋದಲ್ಲಿಟ್ಟು ಪರಾರಿ ಆಗಿದ್ದಾನೆ.

ಆಟೋದಲ್ಲಿ ಮೃತದೇಹ ಇದ್ದುದನ್ನು ಗಮನಿಸಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಿಲಕ್ನಗರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಸದ್ಯ ಮರಣೋತ್ತರ ಪರೀಕ್ಷೆಗಾಗಿ ಸಲ್ಮಾ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...