ಬೆಳ್ತಂಗಡಿ : ಖಾಸಗಿ ಬಸ್ಸು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು…!!

Date:

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುಂಜಾಲಕಟ್ಟೆ ಎಂಬಲ್ಲಿ ಹೆದ್ದಾರಿ ರಸ್ತೆಯನ್ನು ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.

ಸಾವನ್ನಪ್ಪಿದ ಮಹಿಳೆ ಸುನಂದಲತಾ ಎಂದು ತಿಳಿಯಲಾಗಿದೆ.

ಈ ಘಟನೆ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ : ಪಿರ್ಯಾದಿದಾರರಾದ ಇಸ್ಮಾಯಿಲ್, ಪ್ರಾಯ: 31 ವರ್ಷ, ತಂದೆ: ದಿ. ಹಸನಬ್ಬ, ವಾಸ: ಪೊಮ್ಮಾಜೆ ಮನೆ, ಮಾಲಾಡಿ ಗ್ರಾಮ, ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ದಿನಾಂಕ: 26-08-2025 ರಂದು ಬೆಳಿಗ್ಗೆ 07.40 ಗಂಟೆಗೆ ಬೆಳ್ತಂಗಡಿ ತಾಲೂಕು ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿರುವ ಬಳ್ಳಮಂಜಕ್ಕೆ ಹೋಗುವ ರಸ್ತೆ ಬಳಿಯಿಂದ ಪಾದಚಾರಿ ಮಹಿಳೆಯಾದ ಸುನಂದಲತಾ (55) ಎಂಬವರು ಹೆದ್ದಾರಿ ರಸ್ತೆ ಬಳಿಗೆ ನಡೆದುಕೊಂಡು ಬಂದು ಹೆದ್ದಾರಿ ರಸ್ತೆಯನ್ನು ದಾಟುತ್ತಿದ್ದಾಗ, ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ತುಳುನಾಡು ಎಂಬ ಹೆಸರಿನ KA 20 AC 7288 ನೇ ನಂಬ್ರದ ಖಾಸಗಿ ಬಸ್ಸನ್ನು ಅದರ ಚಾಲಕನಾದ ಮಹಮ್ಮದ್‌ ಶರೀಫ್‌ ಎಂಬಾತನು ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಮಹಿಳೆ ಸುನಂದ ಲತಾರವರಿಗೆ ಢಿಕ್ಕಿ ಹೊಡೆಸಿದ್ದು, ಮಹಿಳೆಯು ರಸ್ತೆಗೆ ರಟ್ಟಿ ಬಿದ್ದ ಪರಿಣಾಮ ಮಹಿಳೆಯ ತಲೆಗೆ ಗಂಭೀರವಾದ ರಕ್ತ ಗಾಯವಾದವರನ್ನು ಆಂಬ್ಯುಲೆನ್ಸ್ ಒಂದರಲ್ಲಿ ಬೆಳ್ತಂಗಡಿ ಅಭಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿ ಅಲ್ಲಿ ಪರೀಕ್ಷಿಸಿದ ವೈದ್ಯರು ಸುನಂದಲತಾರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...