ರಾಷ್ಟ್ರೀಯ

ಎಸ್.ಐ.ಆರ್ (SIR) ಕುರಿತು ಸಾರ್ವಜನಿಕರ ಆತಂಕವನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಶೇಖ್ ಅಬೂಬಕರ್ ಅಹ್ಮದ್ ಒತ್ತಾಯ

ನವದೆಹಲಿ: ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಭಯ ಮತ್ತು ಆತಂಕವನ್ನು ನಿವಾರಿಸಲು ತಕ್ಷಣದ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಭಾರತದ ಗ್ರಾಂಡ್ ಮುಫ್ತಿ ಶೇಖ್...

‘ಮಕ್ಕಳನ್ನು ಪ್ರೀತಿಯಿಂದ ಅಪ್ಪಿಕೊಳ್ಳುವುದೇ ಕೇರಳದ ಪರಂಪರೆ’; ಸಚಿವ ವಿ.ಶಿವನ್‌ಕುಟ್ಟಿ

ಶಿರೋವಸ್ತ್ರ ಧರಿಸಿದ ವಿದ್ಯಾರ್ಥಿನಿಯೊಂದಿಗೆ ನಿಂತಿರುವ ಫೋಟೋವನ್ನೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ತಿರುವನಂತಪುರಂ: ಶಿರೋವಸ್ತ್ರ ನಿಷೇಧದಿಂದಾಗಿ ಪಳ್ಳುರುಥಿ ಸೇಂಟ್ ರೀತಾಸ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಶಾಲೆಯನ್ನು ಬದಲಾಯಿಸುತ್ತಿರುವ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ...

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ, ಯುದ್ಧ ವಿರಾಮಕ್ಕೆ ಸ್ವಾಗತ.

ದೆಹಲಿ:ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು ಎಸ್.ಡಿ.ಪಿ.ಐ ಸಲ್ಲಿಸುತ್ತದೆ. ಖತಾರ್, ಈಜಿಪ್ಟ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್,...

ಮಹಾರಾಷ್ಟ್ರ ಸರ್ಕಾರದ ಸೆನ್ಸಾರ್ ಮಂಡಳಿಗೆ ಪತ್ರಕರ್ತ ರೋನ್ಸ್ ಬಂಟ್ವಾಳ್ ಪುನರ್ ನೇಮಕ

ಮುಂಬಯಿ, ಅ.02:ಮಹಾರಾಷ್ಟ್ರ ಸರ್ಕಾರರಂಗಭೂಮಿ ಪ್ರದರ್ಶನ ಪರಿಶೀಲನಾ ಮಂಡಳಿ ಮುಂಬಯಿ ಇದರ ಸೆನ್ಸಾರ್ ಮಂಡಳಿಗೆ ಪತ್ರಕರ್ತ ರೋನ್ಸ್ ಬಂಟ್ವಾಳ್ ಪುನರ್ ನೇಮಕಗೊಳಿಸಿಸರ್ಕಾರದ ಪರ್ಯಟನ ಮತ್ತು ಸಾಂಸ್ಕೃತಿಕ ವ್ಯವಹಾರ ಇಲಾಖೆ01.10.2025 ರಂದು ಕಚೇರಿ ಆದೇಶ ಹೊರಡಿಸಿದೆ.ಸರ್ಕಾರದ...

ಬರೋಡದಲ್ಲಿ ಸಂಭ್ರಮಿಸಲ್ಪಟ್ಟ ತುಳುವರ ಸಾಂಪ್ರದಾಯಿಕ ವೈಶಿಷ್ಟ ದ ಕುರಲ್ ಪರ್ಬ

ಗುಜರಾತ್‌ನಲ್ಲಿ ಸಾಂಪ್ರದಾಯಿಕವಾಗಿ ಕದಿರೆ ಕಟ್ಟಿ ಪ್ರಕೃತಿಮಾತೆಗೆ ಸ್ಮರಿಸಿದ ದಯಾನಂದ ಬೊಂಟ್ರ ಮುಂಬಯಿ  (ಆರ್‌ಬಿಐ), ಸೆ. 28: ಗುಜರಾತ್ ಬಿಲ್ಲವರ ಸಂಘವು ಇಂದಿಲ್ಲಿ ಆದಿತ್ಯವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಿದ್ಧಿವಿನಾಯಕ ಕಾಂಪ್ಲೆಕ್ಸ್‌ನಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ ತುಳುವರ ವೈಶಿಷ್ಟ ಮಯ ಸಾಂಪ್ರದಾಯಿಕ ತೆನೆ (ಕದಿರು) ಹಬ್ಬವನ್ನು (ಕುರಲ್ ಪರ್ಬ-ಪುದ್ದಾರ್) ಪೂಜಾಧಿಗಳೊಂದಿಗೆ ಧಾರ್ಮಿಕದತ್ತವಾಗಿ ನೆರವೇರಿಸಿತು.  ಸಂಘದ ಗೌರವಾಧ್ಯಕ್ಷ ದಯಾನಂದ ಬೊಂಟ್ರ (ಬೆಳ್ಮಣ್ಣು) ಬರೋಡಾ ಇವರ ದಕ್ಷ ಮಾರ್ಗದರ್ಶನ ಹಾಗೂ ಜಿಬಿಎಸ್ ಅಧ್ಯಕ್ಷ ಹರೀಶ್ ವಿ.ಪೂಜಾರಿ ಮಡ್ಯಾರ್ (ದೇರಳಕಟ್ಟೆ) ಮುಂದಾಳುತ್ವದಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಸರಿತಾ ಸೋಮನಾಥ್ ಪೂಜಾರಿ ಸಾರಥ್ಯದಲ್ಲಿ ಅರಿಶಿನ ಕುಂಕುಮ ಕಾರ್ಯಕ್ರಮ ನೆರವೇರಿತು. ಸಂಪ್ರದಾಯಬದ್ಧ ಉಡುಗೆ ಧರಿಸಿ ತುಳುನಾಡ ಹಬ್ಬದ ವಾತಾವರಣ ಸೃಷ್ಟಿಸಿದ ಸದಸ್ಯರನ್ನೊಳಗೊಂಡು ಪದಾಧಿಕಾರಿಗಳು ಸಂಘದ ಮಂದಿರದಲ್ಲಿನ ಮಾತೆ ಗಾಯತ್ರಿದೇವಿ, ಕೋಟಿ-ಚೆನ್ನಯರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುವಿಗೆ ಆರಂಭದಲ್ಲಿ ಪೂಜೆ ನೆರವೇರಿಸಿದರು. ಅಧ್ಯಕ್ಷ ಹರೀಶ್ ವಿ.ಪೂಜಾರಿ ತೆನೆಯನ್ನು (ಕದಿರು) ಹೊತ್ತು ಚಾವಡಿಗೆ ಪ್ರವೇಶಿಸಿದ್ದು ಸದಸ್ಯರು ಮತ್ತು ಮಹಿಳೆಯರು ಪರಂಪರಿಕವಾಗಿ ಹೊಸಬೆಳೆ (ತೆನೆ) ಬರಮಾಡಿ ಕೊಂಡರು. ಶೃಂಗರಿತ ದೇವರ ಮಂಟದ ಮುಂದಿರಿಸಿದ ತೆನೆ, ಕಾಯಿಪಲ್ಯ, ಫಲಪುಷ್ಪಗಳಿಗೆ ದಯಾನಂದ ಬೊಂಟ್ರ ಅವರು ಸೀಯಾಳ, ಹಾಲಿನ ಅಭಿಷೇಕಗೈದು ಪ್ರಾರ್ಥನೆ ನೆರವೇರಿಸಿ  ಸಾಂಪ್ರದಾಯಿಕವಾಗಿ ಕದಿರೆ ಕಟ್ಟಿ,  ಪ್ರಕೃತಿಮಾತೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಜಿಬಿಎಸ್ ಮುಖ್ಯ ಸಂಯೋಜಕ ವಾಸು ವಿ.ಸುವರ್ಣ, ಪ್ರಧಾನ ಕಾರ್ಯದರ್ಶಿ ಸಂತೋಷ್ ಸಾಲಿಯನ್, ಖಜಾಂಚಿ ಸುದೇಶ್ ಕೋಟಿಯನ್, ಜೊತೆ ಕಾರ್ಯದರ್ಶಿ ರವಿ ಸಾಲಿಯನ್, ಜೊತೆ ಕೋಶಾಧಿಕಾರಿ ಜ್ಯೋತಿ ಎಸ್.ಕೋಟ್ಯಾನ್  ಪ್ರಧಾನವಾಗಿ ಉಪಸ್ಥಿತರಿದ್ದರು. ಅಂತೆಯೇ ಜಿಬಿಎಸ್ ಸೂರತ್ ಶಾಖೆಯ ಕಾರ್ಯಾಧ್ಯಕ್ಷ ಪ್ರಭಾಕರ್ ಎಸ್.ಪೂಜಾರಿ, ಉಪಾಧ್ಯಕ್ಷೆ ಕುಸುಮ್    ಗೋಪಾಲ್ ಪೂಜಾರಿ, ಶೋಭಾ ಹರೀಶ್ ಪೂಜಾರಿ, ಮಾ| ಮಾನ್ವಿತ್ ಹೆಚ್.ಪೂಜಾರಿ, ಮಾ| ವರ್ಣಿತ್ ಹೆಚ್.ಪೂಜಾರಿ ಸೇರಿದಂತೆ ಕಾರ್ಯಕಾರಿ ಸಮಿತಿ ಹಾಗೂ ಸದಸ್ಯರನೇಕರು ಉಪಸ್ಥಿತರಿದ್ದರು. ಪೂಜೆಯ ನಂತರ ಶುದ್ಧೀಕರಿಸಿದ ವರುಷದ ಪ್ರಥಮ ಫಸಲು ಭತ್ತದ ಹೊಸತೆನೆಯಾದ ಸುಲಿದ ಹೊಸ ಭತ್ತದ ಅಕ್ಕಿಯೊಂದಿಗೆ ಸಾಂಪ್ರದಾಯಿಕವಾಗಿ ಸಿದ್ಧಪಡಿಸಿದ ಶುದ್ಧ ಶಾಖಾಹಾರಿ (ಹೊಸಅಕ್ಕಿ ಊಟ, ಪಾಯಸ, ಬಗೆಬಗೆಯ ಪಲ್ಯಗಳ) ಹೊಸ ಭೋಜನ (ಪೊಸ ವೊಣಸ್) ಸವಿದು ತೆನೆಹಬ್ಬ ಆಚರಿಸಿದರು. ಕೊನೆಯಲ್ಲಿ ಗರ್ಬಾ, ದಾಂಡಿಯಾ ನಡೆಸಿ ತೆನೆಹಬ್ಬ ಸಂಭ್ರಮಿಸಿ ವಾರ್ಷಿಕ ದಸರಾ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜಿಬಿಎಸ್ ಬರೋಡ ಶಾಖೆಯ ಮಹಿಳಾ ಘಟಕದ ಕಾರ್ಯಧ್ಯಕ್ಷೆ ಯಶೋದಾ ನಾಗೇಶ್ ಪೂಜಾರಿ, ಕಾರ್ಯದರ್ಶಿ ಯಶೋದಾ ರವಿ ಸಾಲಿಯನ್, ಖಜಾಂಚಿ ಆಗಿ ರೇವತಿ ರೋಹಿದಾಸ್ ಪೂಜಾರಿ ಇವರನ್ನು ಆಯ್ಕೆ ಮಾಡಲಾಯಿತು.

Popular

Subscribe

spot_imgspot_img