ಬಾಳೆ ಹೂವನ್ನು ಅರಳಿಸುವ ಮೂಲಕ ಕೆ.ಪಿ.ಎಸ್ ಮಿಜಾರು ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಅನಾವರಣ

Date:

ಮೂಡಬಿದಿರೆ: ತಾಲೂಕಿನ ಕೆ.ಪಿ.ಎಸ್ ಮಿಜಾರ್ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಬಿದಿರೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಅವರು ಬಾಳೆ ಹೂವನ್ನು ಅರಳಿಸುವ ಮೂಲಕ ಕಾಯ೯ಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಅತ್ಯುತ್ತಮ ಆಯೋಜನೆಯ ಬಗ್ಗೆ ಶ್ಲಾಘಿಸಿದರು. ಅಲ್ಲದೆ ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪುಷ್ಪಾಲತಾ ಹಾಗೂ ಮಾಜಿ ಅಧ್ಯಕ್ಷ ಇಕ್ಬಾಲ್, ಪೋಷಕ ಸಮಿತಿ ಕಾರ್ಯದರ್ಶಿ ರಮಾನಂದ, ನಿವೃತ್ತ ಶಿಕ್ಷಕ ನಾಗೇಶ್ ಅವರು ಭಾಗವಹಿಸಿ ಶುಭ ಹಾರೈಸಿದರು.

ಮುಖ್ಯ ಶಿಕ್ಷಕಿ ನಾಗರತ್ನ ಶಿರೂರುರವರು ಸ್ವಾಗತಿಸಿದರು, ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಪ್ರೇಮಾ ರವರು ಧನ್ಯವಾದ ನೀಡಿದರು. ಶಿಕ್ಷಕಿಯರಾದ ಹೇಮಾವತಿ, ಚೈತ್ರಾ ಶೆಟ್ಟಿ ಹಾಗೂ ಇತರ ಎಲ್ಲಾ ಅತಿಥಿ ಶಿಕ್ಷಕರು ಸಹಕಾರ ನೀಡಿದರು.

ಮೂಡುಬಿದಿರೆ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ ಸಾಲ್ಯಾನ್, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ, ಬಿ.ಐ.ಆರ್.ಟಿ ಸುಶೀಲಾ, ತೆಂಕಮಿಜಾರು ಗ್ರಾಮದ ಮಾಜಿ ಅಧ್ಯಕ್ಷೆ ಶಾಲಿನಿ ಕೆ. ಸಾಲಿಯಾನ್, ಕೆ.ಪಿ.ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾ ಹಾಗೂ ಶಿಕ್ಷಕಿ ಪವಿತ್ರ ಅವರು ಆಗಮಿಸಿ ಮಕ್ಕಳು ಮಾರಾಟಕ್ಕಿಟ್ಟಿದ್ದ ವಸ್ತುಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹ ನೀಡಿದರು.

15 ಕ್ಕಿಂತ ಹೆಚ್ಚಿನ ವಿವಿದ ಬಗೆಯ ವಸ್ತುಗಳು, ಬಗೆ ಬಗೆಯ ತಿಂಡಿ ತಿನಿಸುಗಳು, ತಾಜಾ ಹಣ್ಣು ತರಕಾರಿಗಳ ಮಳಿಗೆಗಳ ಮೂಲಕ ಪೋಷಕರ ಹಾಗೂ ಊರವರ ಸಹಭಾಗಿತ್ವದಿಂದ ವಿದ್ಯಾಥಿ೯ಗಳು ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಸಿ ಉತ್ತಮ ಲಾಭವನ್ನು ಗಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...