ಎಕ್ಸಲೆಂಟ್ ಸಂಸ್ಥೆಯಲ್ಲಿ ಕ್ರಿಸ್ಮಸ್ ಆಚರಣೆ

Date:

ಮೂಡುಬಿದಿರೆ: ಶಾಂತಿ, ಪ್ರೀತಿ ಮತ್ತು ಕರುಣೆಯ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಿದ ಯೇಸು ಕ್ರಿಸ್ತನ ಜನ್ಮೋತ್ಸವವಾದ ಕ್ರಿಸ್ಮಸ್ ಹಬ್ಬವು,ಮಾನವ ಹೃದಯಗಳಲ್ಲಿ ನಂಬಿಕೆ, ಸಹೋದರತ್ವ, ಹಂಚಿ ತಿನ್ನುವ ಗುಣ ಮತ್ತು ಮಾನವೀಯ ಮೌಲ್ಯಗಳ ದೀಪವನ್ನು ಬೆಳಗಿಸಲಿ ಎಂದು ಖ್ಯಾತ ಉದ್ಯಮಿ ಶರ್ಲಿನ್ ರೋಡ್ರಿಗಸ್ ಎಂದು ಹೇಳಿದರು ಅವರು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಕ್ರಿಸ್ಮಸ್ ದಿನಾಚರಣೆಯ ಸಂಭ್ರಮದಲ್ಲಿ ಮಾತನಾಡಿದರು.

ಕ್ರಿಸ್ಮಸ್ ನಕ್ಷತ್ರವು – “ಬೆಳಕು ನೀನಾಗು, ದಾರಿ ನೀನೇ ಆಗು” ಎಂಬ ಮಾನವೀಯ ಸಂದೇಶವನ್ನು ಜಗತ್ತಿಗೆ ಸಾರುತ್ತದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ವಸುದೈವ ಕುಟುಂಬಕಂ ಎಂಬ ಭಾರತೀಯ ಮಹಾವಾಕ್ಯವು “ಪೂರ್ಣ ಭೂಮಿಯೇ ಒಂದು ಕುಟುಂಬ” ಎಂಬ ಉದಾತ್ತ ತತ್ತ್ವವನ್ನು ಸಾರುತ್ತದೆ. ಕ್ರಿಸ್ಮಸ್ ಸೇವೆ, ದಾನ ಮತ್ತು ತ್ಯಾಗವನ್ನು ಜೀವನಮಾರ್ಗವಾಗಿ ಪ್ರತಿಪಾದಿಸುತ್ತದೆ ಎಂದರು.

ವೇದಿಕೆಯಲ್ಲಿ ಎಕ್ಸಲೆಂಟ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ , ಸಿ ಬಿ ಎಸ್ ಈ ಪ್ರಾಂಶುಪಾಲ ಶ್ರೀಪ್ರಸಾದ್ ಉಪಸ್ಥಿತರಿದ್ದರು. ಉಪನ್ಯಾಸಕ ಸಂತೋಷ್ ನಿರೂಪಿಸಿದರು. ಶಿಕ್ಷಕಿ ಅನಿತಾ ಸ್ವಾಗತಿಸಿ, ಮೆಲಿಟಾ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುವವಾಹಿನಿ ಮೂಡಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆ

ಮೂಡುಬಿದಿರೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನೂತನ...

ಮೂಡುಮಾನಾ೯ಡು ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಮೂಡಬಿದಿರೆ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡು ಮಾರ್ನಾಡುವಿನಲ್ಲಿ ಮೆಟ್ರಿಕ್...

ಮೂಡಬಿದಿರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಉದ್ಘಾಟನೆ

ಮೂಡಬಿದಿರೆ: ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಮತ್ತು ನೆರವು ನೀಡುವುದು ಕಾನೂನು...

ಕಲ್ಕಟ್ಟ ಹಸನಬ್ಬ ಹಾಜಿ ವಫಾತಾಗಿ ಹತ್ತು ವರ್ಷ

ದೇರಳಕಟ್ಟೆ: ಪವಿತ್ರ ರಮಳಾನ್ ಮಾಸದಲ್ಲಿ ವಫಾತಾಗುವ ಭಾಗ್ಯ ದೊರೆತ ನಾಡಿನ ಹಿರಿಯ...