ಮೂಡುಬಿದಿರೆ: ದಿ. ವಿಜೇಶ್ ಅಮಿನ್ ಸ್ಮರಣಾರ್ಥ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದಲ್ಲಿ ಸುಸಜ್ಜಿತ ಬಸ್ ತಂಗುದಾಣವನ್ನು ನಿರ್ಮಿಸಿಕೊಡುವಂತೆ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರಿಗೆ ಮನವಿ ನೇತಾಜಿ ಬ್ರಿಗೇಡ್ ಸಂಘಟನೆಯವರು ಸಲ್ಲಿಸಿದರು.

ಯುವ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಜೇಶ್ ಅಮಿನ್ ಅವರ ನೆನಪನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ ಈ ಮನವಿಯನ್ನು ಸಲ್ಲಿಸಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗಾಂಧಿನಗರದಲ್ಲಿ ಆಧುನಿಕ ಶೈಲಿಯ ಬಸ್ ನಿಲ್ದಾಣದ ಅಗತ್ಯವಿದ್ದು, ಶಾಸಕರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ.
ಸಂಘಟನೆಯ ಗೌರವ ಸಲಹೆಗಾರರು, ಪುರಸಭಾ ಉಪಾಧ್ಯಕ್ಷರಾದ ನಾಗರಾಜ್ ಪೂಜಾರಿ, ಸಂಚಾಲಕ ರಾಹುಲ್ ಕುಲಾಲ್, ಪದಾಧಿಕಾರಿಗಳಾದ ಎಸ್. ಕುಮಾರ್ ಮಾಸ್ತಿಕಟ್ಟೆ, ನವೀನ್ ಗಾಂಧಿನಗರ, ನಿತ್ಯಾನಂದ ಗಾಂಧಿನಗರ ಉಪಸ್ಥಿತರಿದ್ದರು.


