ಮಂಗಳೂರು ವಿವಿಯಲ್ಲಿ ಗ್ರಾಹಕ ಜಾಗೃತಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ

Date:

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನ ಮಂಗಳೂರು ಇದರ ವಾಣಿಜ್ಯ ವಿಭಾಗದ ವತಿಯಿಂದ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಆರಂಭಗೊಂಡ ಗ್ರಾಹಕ ಜಾಗೃತಿ ಸರ್ಟಿಫಿಕೇಟ್ ಕೋರ್ಸ್‌ನ ಉದ್ಘಾಟನಾ ಸಮಾರಂಭ ಗುರುವಾರ ಕಾಲೇಜ್‌ನ ಶಿವರಾಮ ಕಾರಂತ ಹಾಲ್‌ನಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಜಿಲ್ಲಾ ಗ್ರಾಹಕ ಒಕ್ಕೂಟಗಳ ಅಧ್ಯಕ್ಷೆ ಸುನಂದಾ ಉದ್ಘಾಟಿಸಿ ಮಾತನಾಡಿ ನಾವೆಲ್ಲರೂ ಗ್ರಾಹಕರ ಗಿರುದರಿಂದ. ನಾವೆಲ್ಲರೂ ತೆರಿಗೆಗಳನ್ನು ಪಾವತಿಸುತ್ತೇವೆ. ಹುಟ್ಟಿನಿಂದ ಸಾವಿನವರೆಗೆ ನಾವು ಗ್ರಾಹಕರೇ. ಗ್ರಾಹಕರಾಗಿರುವುದರಿಂದ ನಾವು ಹಲವು ವಿಷಯಗಳನ್ನು ತಿಳಿದುಕೊಳ್ಳಬೇಕು, ಅದು ಜಿಎಸ್‌ಟಿ, ಉತ್ಪನ್ನ ಗಳ ಅವಧಿ ನಿಖರತೆ ಯನ್ನು ಸ್ಪಷ್ಟ ಪಡಿಸಿಕೊಳ್ಳಬೇಕು. ಎಫ್‌ಎಫ್‌ಎಸ್‌ಐ ನಿಯಮಗಳು ಆಗಿರಬಹುದು. ನಮ್ಮಲ್ಲಿ ಹಲವರು ಇತ್ತೀಚೆಗೆ ಇವುಗಳ ಬಗ್ಗೆ ತಿಳಿದಿದ್ದೇವೆ. ಆದರೆ ಎಲ್ಲಾರೂ ಇದರ ಬಗ್ಗೆ ಜಾಗೃತ ರಾಗಬೇಕು. ನಾವು ಖರೀದಿಸುವ ಉತ್ಪನ್ನಗಳ ಬಗ್ಗೆ ಅತೃಪ್ತಿ ಹೊಂದಿರುವಾಗ ಪ್ರಶ್ನಿಸುವುದು ನಮ್ಮ ಹಕ್ಕುಗಳು ಮತ್ತು ಜವಾಬ್ದಾರಿ ಎಂಬುದನ್ನು ನಾವು ತಿಳಿದಿರಬೇಕು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಗೌಡ ವಹಿಸಿ ಮಾತನಾಡಿ ನಾವೆಲ್ಲರೂ ಹುಟ್ಟಿನಿಂದ ಗ್ರಾಹಕರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಮಾನ್ಯವಾಗಿ ನಾವು ಉತ್ಪನ್ನಗಳನ್ನು ಖರೀದಿಸಿದ ನಂತರ ನಾವು ಆ ಉತ್ಪನ್ನದಲ್ಲಿ ಲೋಪ ದೋಷ ಗಳಿದ್ದರೆ, ಅದನ್ನ ಪ್ರಶ್ನಿಸುವುದಿಲ್ಲ. ಉತ್ಪನ್ನ ಗಳ ಅವಧಿ ಮುಗಿದ ಸಂದರ್ಭದಲ್ಲಿ ನಾವು ಅವುಗಳನ್ನು ಎಸೆಯುತ್ತೇವೆ. ಹೊರತು ನಮಗಾದ ಮೋಸದ ಬಗ್ಗೆ ಗ್ರಾಹಕರ ವೇದಿಕೆಗೆ ದಾವೆ ಹೂಡುವುದಿಲ್ಲ. ಅದರಿಂದ ವಿದ್ಯಾರ್ಥಿಗಳಿಗೆ ಈ ಕೋರ್ಸ್ ನಿಮಗೆ ನೀವು ಖರೀದಿಸುವ ವಸ್ತು ಗಳ ಲೋಪ ದೋಷ ಗಳ ಬಗ್ಗೆ, ತಿಳಿಕೊಳ್ಳಲು ಮತ್ತು ತನಿಖೆ ಮಾಡಲು ಹಕ್ಕಿದೆ ಎಂಬ ಎಲ್ಲಾ ಜ್ಞಾನವನ್ನು ಒದಗಿಸುವ ಗುರಿಯನ್ನು ಹೊಂದಿದೆ. ನೀವು ಕಾನೂನುಗಳು, ಮೂಲಭೂತ ಹಕ್ಕುಗಳು ಮತ್ತು ಕಾಯ್ದೆಗಳನ್ನು ತಿಳಿದಿದ್ದರೆ, ಉತ್ಪನ್ನದ ಅತೃಪ್ತಿಯ ವಿರುದ್ಧ ಹೋರಾಡಲು ನಿಮಗೆ ಸಾಧ್ಯವಾಗುತ್ತದೆ.ಎಂದು ಅವರು ಹೇಳಿದರು.

ಕೋರ್ಸ್ ಕೋ ಆರ್ಡಿ ನೆಟರ್ ಡಾ. ಯತೀಶ್ ಕುಮಾರ್ ಪ್ರಾಸ್ತವಿಕ ವಾಗಿ ಮಾತನಾಡಿ 6 ತಿಂಗಳ ಕೋರ್ಸ್ ಇದಾಗಿದ್ದು ಡಿಸಿ ಕಛೇರಿಗೆ ಫೀಲ್ಡ್ ವಿಸಿಟ್ ಇರುತ್ತದೆ. ಹಾಗೂ ಅಸೈನ್ಮೆಂಟ್ ಪ್ರಾಜೆಕ್ಟ್ ಫೀಲ್ಡ್ ವಿಸಿಟ್ ಮಾಡಿ ನೀಡಬೇಕಾಗುತ್ತದೆ. ಕಾಲೇಜು ಮುಗಿಯುವ ಹೊತ್ತಿನಲ್ಲಿ ನಿಮ್ಮ ರೆಸೂಮ್ ನಲ್ಲಿ ತೂಕದ ಅನುಭವ ವಿರುತ್ತದೆ. ಎಂದು ಅವರು ಕಿವಿ ಮಾತು ಹೇಳಿದರು.

ಗ್ರಾಹಕ ಸೇವಾ ಕೇಂದ್ರ ಒಕ್ಕೂಟ ಗಳ ಸೆಕ್ರೆಟರಿ ಸುನಂದಾ ಡಿ.ಆರ್. ಮತ್ತೆ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...