ಭ್ರಷ್ಟಾಚಾರ ಆರೋಪ: ಸಜಿಪಮೂಡ ಗ್ರಾ.ಪಂ ಸಭೆಯಲ್ಲಿ ಸಿಬ್ಬಂದಿಯನ್ನು ವಜಾಗೊಳಿಸಲು ಗ್ರಾಮಸ್ಥರ ಪಟ್ಟು

Date:

ಬಂಟ್ವಾಳ: ತಾಲ್ಲೂಕಿನ ಸಜಿಪ ಮೂಡ ಗ್ರಾಮದ 2025–26 ಸಾಲಿನ ಗ್ರಾಮ ಸಭೆ ದಿನಾಂಕ 10.12.2025 (ಬುಧವಾರ) ರಂದು ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ ಅವರ ನೇತೃತ್ವದಲ್ಲಿ ಸಜಿಪ ಮೂಡ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳ ವಿರುದ್ಧ ಭ್ರಷ್ಟಾಚಾರ ಹಾಗೂ ಅಕ್ರಮ ಕೆಲಸಗಳ ಬಗ್ಗೆ ಗಂಭೀರ ಆರೋಪಗಳನ್ನು ಹೊರಹಾಕಿದರು.

ಚರ್ಚಾ ಕೂಟದಲ್ಲಿ ಸಮೀರ್ ಕಾರಜೆ ರವರ ಪ್ರಶ್ನೆಯ ಹಿನ್ನೆಲೆಯಲ್ಲಿ, ಲಾವಣ್ಯ ರವರು ಸಾರ್ವಜನಿಕರಿಂದ ಸಂಗ್ರಹವಾಗುವ ನೀರಿನ ಪಾವತಿಯ ಧನದ ದುರುಪಯೋಗ ಕುರಿತು ಸ್ಪಷ್ಟಪಡಿಸಿದರು. ಆದರೆ ಈ ಆರೋಪಗಳ ಬಗ್ಗೆ ವಿವರ ಕೇಳಿದಾಗ ಸಂಬಂಧಿಸಿದ ಅಧಿಕಾರಿಗಳು ಮತ್ತು ಪಿಡಿಒ ಉತ್ತರಿಸಲು ನಿರಾಕರಿಸಿದರು.

ಈ ಕ್ರಮಕ್ಕೆ ವಿರೋಧವಾಗಿ ಮಲಿಕ್ ಕೊಳಕೆ, ಬಸೀರ್ ಬೊಳ್ಳಾಯಿ ಸೇರಿದಂತೆ ಗ್ರಾಮಸ್ಥರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಗ್ರಾಮಸ್ಥರ ಒತ್ತಾಯ, ಪ್ರಶ್ನೆಗಳು ಹಾಗೂ ದಾಖಲೆಗಳ ಮುಂದೆ, ನಂತರದ ಹಂತದಲ್ಲಿ ಪಿಡಿಒ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡರು ಎಂದು ತಿಳಿದುಬಂದಿದೆ.

ಗ್ರಾಮಸ್ಥರು ಪಟ್ಟುಬಿಟ್ಟದೇ, ಆರೋಪಿತರಾದ ಸಿಬ್ಬಂದಿಯನ್ನು ತಕ್ಷಣ ವಜಾ ಮಾಡಬೇಕು, ಅಕ್ರಮದಲ್ಲಿ ಭಾಗಿಯಾದವರನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಗ್ರಾಮಸ್ಥರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಕೊನೆಗೆ, ಚರ್ಚೆಯ ನಂತರ ಸಿಬ್ಬಂದಿಯನ್ನು ವಜಾ ಮಾಡುವ ನಿರ್ಣಯವನ್ನು ಗ್ರಾಮ ಸಭೆಯಲ್ಲಿ ಏಕಮತದಿಂದ ಅಂಗೀಕರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...