ದಸರಾ ಉತ್ಸವ ಸಂದರ್ಭದಲ್ಲಿ ಅತ್ಯಾಚಾರಗೈದು ಕೊಲೆಗೈಯಲ್ಪಟ್ಟ ಬಾಲಕಿಗೆ ನ್ಯಾಯ ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು: ವಿಮೆನ್ ಇಂಡಿಯಾ ಮೂವ್ಮೆಂಟ್

Date:

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ದಸರಾ ಉತ್ಸವ ಸಂದರ್ಭದಲ್ಲಿ ಜೀವನೋಪಾಯಕ್ಕಾಗಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ರಾಧಿಕಾ ಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣ, ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ನಿರಂತರವಾಗುತ್ತಿರುವ ಇಂತಹ ಹೇಯ ಕೃತ್ಯ ಗಳನ್ನು ಮಟ್ಟ ಹಾಕುವಲ್ಲಿ ನಮ್ಮ ವ್ಯವಸ್ಥೆಯು ವಿಫಲವಾಗಿರುವುದು ಖೇದಕರ.
ಪ್ರಕರಣದ ಆರೋಪಿಯನ್ನು ಶೀಘ್ರವೇ ಪತ್ತೆ ಹಚ್ಚಿ ಬಂಧಿಸಲಾಗಿದ್ದರೂ , ಆರೋಪಿಯನ್ನು ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸುವವರೆಗೆ ಬಾಲಕಿಗೆ ನ್ಯಾಯ ದೊರೆಯಲು ಸಾಧ್ಯವಿಲ್ಲ.
ಆದುದರಿಂದ ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಕೊಂಡು ಬಡ, ಮುಗ್ಧ ಹೆಣ್ಣು ಮಗುವಿಗೆ ನ್ಯಾಯ ಒದಗಿಸಬೇಕು. ಅಲ್ಲದೆ ಹೊಟ್ಟೆ ಪಾಡಿಗಾಗಿ ಊರಿಂದ ಊರಿಗೆ ವಲಸೆ ಹೋಗುವ ನಿರಾಶ್ರಿತರಿಗೆ , ವಿಶೇಷವಾಗಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಸೂಕ್ತವಾದ ವಸತಿ ಸೌಕರ್ಯಗಳನ್ನು ಒದಗಿಸಬೇಕು. ಮೃತ ಬಾಲಕಿಯ ಕುಟುಂಬಕ್ಕೆ ಶೀಘ್ರಶವಾಗಿ ಸೂಕ್ತ ಪರಿಹಾರ ನೀಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮೈಸೂರು ಜಿಲ್ಲಾಧ್ಯಕ್ಷೆ ಝರೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...