ದೆರಳಕಟ್ಟೆ: ದೆರಳಕಟ್ಟೆಯ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಸ್ವಾಗತ್ ಆಡಿಟೋರಿಯಂನ ಭವ್ಯ ಉದ್ಘಾಟನಾ ಸಮಾರಂಭ ನಡೆಯಿತು.
ಸಯ್ಯಿದ್ ಅಲಿ ತಂಙಳ್ ಕುಂಬೋಲ್ ಉದ್ಘಾಟಿಸಿದರು. ಸಯ್ಯಿದ್ ಶರಫುದ್ದೀನ್ ತಂಙಳ್ ದುಆ ನೆರವೇರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಸಹಾಯಕ ಹಾಗೂ ಆರೋಗ್ಯ ಮಂಡಳಿಯ ಅಧ್ಯಕ್ಷರಾದ ಡಾ. ಯು.ಟಿ. ಇಫ್ತಿಖಾರ್ ಅಲಿ, ದೇರಳಕಟ್ಟೆ ಬದ್ರಿಯ ಜುಮಾ ಮಸೀದಿ ಖತೀಬ್ ತಾಜುದ್ದೀನ್ ರಹ್ಮಾನಿ, ಕಾನೆಕೆರೆ ತಾಜುಲ್ ಉಲಮಾ ಮಸೀದಿ ಖತೀಬ್ ಇಸ್ಹಾಕ್ ಝುಹುಹ್ರಿ, ಕುಂಡೂರು ಮಸೀದಿ ಖತೀಬ್ ಅಶ್ರಫ್ ಫೈಝಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೊಳಿಯಾರ್, ಅಶ್ರಫ್ ಅಬೂಬಕ್ಕರ್, ಬದ್ರಿಯ ಜುಮಾ ಮಸೀದಿ ಅಧ್ಯಕ್ಷ ಶೆಟ್ ಮೋನು, ರತ್ನ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಬೆಳ್ಮ ಗ್ರಾ.ಪಂ ಸದಸ್ಯ ಇಕ್ಬಾಲ್ ಎಚ್.ಆರ್, ತಾಜುಲ್ ಉಲಮಾ ಟ್ರಸ್ಟಿ ಏಷ್ಯನ್ ಅಹ್ಮದ್ ಹಾಜಿ, ಜನಪ್ರಿಯ ಆಸ್ಪತ್ರೆಯ ಡಾ. ನುಹ್ಮಾನ್, ಉದ್ಯಮಿ ಸಿಎಂ ಫಾರೂಕ್, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸದಸ್ಯ ಡಿಎ ಅಶ್ರಫ್, ಎಸ್ಡಿ ಪಿಐ ಮುಖಂಡ ಝಾಹೀದ್ ಮಲಾರ್, ಬೆಳ್ಮ ಗ್ರಾ.ಪಂ ಮಾಜಿ ಅಧ್ಯಕ್ಷ ಅಕ್ಸಾ ಉಸ್ಮಾನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಅಸ್ಪತ್ರೆ ವತಿಯಿಂದ ರಕ್ತದಾನ ಶಿಬಿರ ಹಾಗೂ ಜನಪ್ರಿಯ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ ನಡೆಯಿತು.

ದೆರಳಕಟ್ಟೆಯ ಸ್ವಾಗತ್ ಆಡಿಟೋರಿಯಂ ಅತ್ಯಾಧುನಿಕ ಒಳಾಂಗಣ ವಿನ್ಯಾಸ ಹಾಗೂ ವಿಶಾಲ ಸಭಾಂಗಣಗಳೊಂದಿಗೆ ಸಜ್ಜುಗೊಂಡಿದ್ದು, ವಿವಾಹ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಅತ್ಯುತ್ತಮ ತಾಣವಾಗಲಿದೆ ಹೆಚ್ಚಿನ ಮಾಹಿತಿಗೆ +91 81475 55513 / +91 99024 96695 ಸಂಪರ್ಕಿಸಿರಿ.




