
ಉಳ್ಳಾಲ: ತಲಪಾಡಿ ದೇವಿನಗರ ಶ್ರೀ ಅವಿನಾಶಿ ಭಜನಾ ಮಂದಿರ ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ಭಾನುವಾರ ಶ್ರೀ ಅವಿನಾಶಿ ಭಜನಾ ಮಂದಿರದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಿತು.ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿ, ಕೇಂದ್ರ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಆಅಜಠನರಿಗೆ ಅರಿವು ಮೂಡಿಸುವ ಕೆಲಸ ಅಗತ್ಯ, ಭಜನಾ ಮಂದಿರದಿಂದ ಅಯೋಜಿಸಿರುವ ಕಾರ್ಯಕ್ರಮದ ಮೂಲಕ ಹಿಂದೂ ಸಮಾಜ, ಹಿಂದುತ್ವಕ್ಕೆ ಶಕ್ತಿ ಕೊಡುವ ಕೆಲಸ ಆಗಲಿ ಎಂದು ಹೇಳಿದರು.ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕೂವೆತ್ತಬೈಲ್ ಮಾತನಾಡಿ, ಪ್ರಧಾನಿ ಮೋದಿಯವರು 1800 ಯೋಜನೆಗಳನ್ನು ಜಾರಿಗೆ ತಂದಿದ್ದು ಜನಸಾಮಾನ್ಯರಿಗೆ ತಿಳಿಸಬೇಕಾದರೆ ಸಂಘ-ಸಂಸ್ಥೆಗಳು ಕಾರ್ಯಕ್ರಮ ನಡೆಸುವ ಮೂಲಕ ಸಹಕಾರ ನೀಡಬೇಕು ಎಂದು ಹೇಳಿದರು. ಅಂಚೆ ಇಲಾಖೆಯ ನಿರೀಕ್ಷಕಿ ಸುಪ್ರಿಯಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಪ್ರಗತಿಪರ ಕೃಷಿಕ ನಾರಾಯಣ ಕಿಲ್ಲೆ, ಕಿನ್ಯ ಕೇಶವ ಶಿಶು ಮಂದಿರದ ವ್ಯವಸ್ಥಾಪಕ ನಾರಾಯಣ ಕಜೆ, ಬಿಜೆಪಿ ಮಂಜನಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಿತ್ಯಾನಂದ ಭಂಡಾರಿ, ಅವಿನಾಶಿ ಮಹಾದೇವ ಭಜನಾ ಮಂದಿರದ ಅಧ್ಯಕ್ಷ ಯುವರಾಜ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು. ತಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು ಸ್ವಾಗತಿಸಿದರು. ಕ್ರೀಡಾ ಸಂಚಾಲಕ ಅಶ್ವಿತ್ ವಂದಿಸಿದರು. ಗೋಪಾಲ ಕೃಷ್ಣ ಮೇಲಾಂಟ ಕಾರ್ಯಕ್ರಮ ನಿರೂಪಿಸಿದರು.


