ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವಧರ್ಮ ಭಜನಾ ಕಮ್ಮಟ ಉದ್ಘಾಟನೆ

Date:

ಮೂಡುಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಸರ್ವಧರ್ಮ ಭಜನಾ ಕಮ್ಮಟ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಲಾಯಿತು.

ಕಮ್ಮಟವನ್ನು ನಮ್ಮ ಶಾಲಾ ಸಂಚಾಲಕರಾದ ಕೆ.ಹೇಮರಾಜ್ ಅವರು ದೀಪಾ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಭಜನೆಯು ಮಕ್ಕಳಲ್ಲಿ ಉಚ್ಛಾರಣಾ ದೋಷವನ್ನು ಸರಿಪಡಿಸುವಲ್ಲಿ ಸಹಕಾರಿಯಾಗಿದ್ದು , ಈ ಹಿಂದೆಯೂ ನಮ್ಮ ಶಾಲೆಯಲ್ಲಿ ಭಜನೆ ನಡೆಯುತ್ತಿದ್ದುದನ್ನು ಸ್ಮರಿಸಿದ ಅವರು ಉತ್ತಮ ಭಜನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಶಶಿಕಾಂತ್ ವೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜನೆಯು ಸರ್ವರನ್ನೂ ಒಗ್ಗೂಡಿಸುತ್ತದೆ ಎಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳಿಂದ ಕುಣಿತ ಭಜನೆಯು ನೆರವೇರಿತು. ಶಾಲಾ ಎಲ್ಲಾ ವಿದ್ಯಾರ್ಥಿಗಳು ಸರ್ವಧರ್ಮದ ಭಜನೆಯಲ್ಲಿ ಭಾಗವಹಿಸಿದರು.

ಹಿರಿಯ ಶಿಕ್ಷಕಿ ಮಂಜುಳಾ ಜೈನ್ ಅವರು ಕಾಯ೯ಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...