ತೆಂಕಮಿಜಾರಿನಲ್ಲಿ ವಿವಿಧ ಯೋಜನೆಗಳ ಸವಲತ್ತುಗಳ ವಿತರಣೆ

Date:

ಮೂಡುಬಿದಿರೆ: ತೆಂಕಮಿಜಾರು ಗ್ರಾ. ಪಂ. ವ್ಯಾಪ್ತಿಯ ತೆಂಕಮಿಜಾರು ಹಾಗೂ ಬಡಗಮಿಜಾರು ಗ್ರಾಮಗಳ ಪ. ಜಾತಿ ಮತ್ತು ಪ. ಪಂಗಡಗಳ ಹಾಗೂ ವಿಕಲಚೇತನರ ಕುಂದು ಕೊರತೆ ಸಭೆ ಹಾಗೂ ವಿವಿಧ ಯೋಜನೆಗಳ ಸವಲತ್ತುಗಳ ವಿತರಣಾ ಕಾಯ೯ಕ್ರಮವು ಶನಿವಾರ ಅಶ್ವತ್ಥಪುರ ಸಂತೆಕಟ್ಟೆಯ ವಿವಿದೋದ್ದೇಶ ಸಭಾಂಗಣದಲ್ಲಿ ನಡೆಯಿತು.

ಶಾಸಕ ಉಮಾನಾಥ ಎ. ಕೋಟ್ಯಾನ್ ಕಾಯ೯ಕ್ರಮವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಶುಭ ಹಾರೈಸಿದರು. ತೆಂಕಮಿಜಾರು ಗ್ರಾ. ಪಂಚಾಯತ್ ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದು ನಾವು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಪಂಚಾಯತ್ ನ ಸ್ವಂತ ಸಂಪನ್ಮೂಲ ಶೇ 5ರ ನಿಧಿಯಲ್ಲಿ ಅಂಗವಿಕಲರ ಶ್ರೇಯೋಭಿವೃದ್ಧಿ ನಿಧಿಯಿಂದ 65 ಫಲಾನುಭವಿಗಳಿಗೆ ತಲಾ ಎರಡು ಸಾವಿರದಂತೆ 1.30 ಲಕ್ಷ, ಪ. ಜಾತಿ/ ಪ. ಪಂಗಡದ ಶೇ 25ರ ನಿಧಿಯ ರೂ. 1 ಲಕ್ಷ ವೆಚ್ಚದಲ್ಲಿ 23 ಫಲಾನುಭವಿಗಳಿಗೆ ಸಿಂಟೆಕ್ಸ್ ಟ್ಯಾಂಕ್, ರೂ.2 ಲಕ್ಷ ವೆಚ್ಚದಲ್ಲಿ 69 ವಿದ್ಯಾಥಿ೯ಗಳಿಗೆ ಸ್ಟಡಿ ಟೇಬಲ್ಸ್ ಹಾಗೂ 6 ಮಂದಿಗೆ ವೈದ್ಯಕೀಯ ವೆಚ್ಚಕ್ಕಾಗಿ ತಲಾ 5 ಸಾವಿರದಂತೆ 30 ಸಾವಿರದ ಚೆಕ್ ವಿತರಿಸಲಾಗಿದೆ. ಇನ್ನು ಬಾಕಿ ಉಳಿದವರಿಗೆ ಪಂಚಾಯತ್ ನಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.

ಸನ್ಮಾನ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾದಸ್ವರ ವಾದಕ ದಿನೇಶ್ ಅವರನ್ನು, ನಿವೃತ್ತಿ ಹೊಂದಿರುವ ಆಶಾ ಕಾಯ೯ಕತೆ೯ಯರಾದ ಯಶೋಧ, ಬೇಬಿ, ಅಂಗನವಾಡಿ ಕಾಯ೯ಕತೆ೯ ಕಮಲ ಅವರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲ್ಲಮುಂಡ್ಕೂರು ವಲಯದ ಮೇಲ್ವೀಚಾರಕಿ ಶುಭ, ಗ್ರಾಮ ಆಡಳಿತಾಧಿಕಾರಿಗಳಾದ ತೆಂಕಮಿಜಾರಿನ ಸಂತೋಷ್ ಹಾಗೂ ಬಡಗಮಿಜಾರಿನ ಅಜು೯ನ್ ಅವರು ಇಲಾಖಾ ಮಾಹಿತಿ ನೀಡಿದರು.

ಪಂಚಾಯತ್ ಸದಸ್ಯರಾದ ರುಕ್ಮಿಣಿ, ಹರಿಪ್ರಸಾದ್ ಶೆಟ್ಟಿ, ಸಮಿತಾ, ನಮಿತಾ, ದಿನೇಶ್ ಎಲ್., ವಿದ್ಯಾನಂದ ಶೆಟ್ಟಿ, ಮಹೇಶ್, ನಿಶಾ, ಯೋಗಿನಿ, ಲಕ್ಷ್ಮೀ, ಗೀತಾ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಯ೯ದಶಿ೯ ರಮೇಶ್ ಬಂಗೇರಾ ಫಲಾನುಭವಿಗಳ ವಿವರ ನೀಡಿದರು. ರಾಕೇಶ್ ಭಟ್ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...