
ಉಳ್ಳಾಲ: ರಾಜ್ಯದ ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ರವರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ವಿಧಾನಸೌಧದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಳ್ಳಾಲ ದರ್ಗಾ ಕ್ಕೆ ಭೇಟಿ ನೀಡುವಂತೆ ಅವರಿಗೆ ಆಹ್ವಾನ ನೀಡಲಾಯಿತು. ದರ್ಗಾದ ಅಭಿವೃದ್ಧಿ ಗೆ ಸಹಕಾರ ನೀಡುವಂತೆ ಇದೇ ವೇಳೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ದರ್ಗಾ ಉಪಾಧ್ಯಕ್ಷ ಯು.ಎಂ ಅಶ್ರಫ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ , ಕೋಶಾಧಿಕಾರಿ ನಾಝಿಂ ರಹ್ಮಾನ್ ಉಪಸ್ಥಿತರಿದ್ದರು.


