ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ- ಎಸ್.ಡಿ.ಪಿ.ಐ

Date:

ಬೆಳಗಾವಿ. ನ – 4 : ಜಿಲ್ಲೆಯ ರೈತರು ಕಳೆದ ಹಲವು ದಿನಗಳಿಂದ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗೆ ಬಂದು ಹೋರಾಟ ನಡೆಸುತ್ತಿದ್ದರು ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಸರ್ಕಾರದ ಈ ನಡೆ ಅತ್ಯಂತ ಖಂಡನೀಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ಜಿಲ್ಲಾಧ್ಯಕ್ಷ, ಮೌಜಮ್ಮಾ ಮುಲ್ಲಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಬ್ಬು ದರವನ್ನು ರೂ. 3,500 ಮುಂದುವರಿಸಿ ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸರ್ಕಾರ ಮಾನ್ಯತೆ ನೀಡಿದೆ ನಿರ್ಲಕ್ಷ್ಯತೆ ತೋರಿಸುವುದನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಗೊತ್ತಾಗುತ್ತಿದೆ. ರೈತರ ದುಡಿಮೆ ಮತ್ತು ಅವರ ಶ್ರಮವೇ ನಮ್ಮ ರಾಜ್ಯದ ಆರ್ಥಿಕತೆಗೆ ಬೆನ್ನೆಲುಬು. ಆದರೆ ಸರ್ಕಾರ ಈ ಹೋರಾಟದ ಧ್ವನಿಗೆ ಕಿವಿಗೊಡದೆ, ರೈತರನ್ನೇ ಸಂಕಷ್ಟಕ್ಕೆ ತಳ್ಳುತ್ತಿದೆ. ವರ್ಷದಿಂದ ವರ್ಷಕ್ಕೆ ಬೆಳೆ ಖರ್ಚು ಹೆಚ್ಚಾಗುತ್ತಾ ಬಂದರೂ ಬೆಂಬಲ ಬೆಲೆ ಯಥಾಸ್ಥಿತಿಯಲ್ಲಿಯೇ ಉಳಿದಿದೆ.

ರೈತರಿಗೆ ಸಾಲದ ಹೊರೆ, ಹೆಚ್ಚು ಖರ್ಚಿನ ಒತ್ತಡ ಮತ್ತು ಪ್ರಕೃತಿ ವಿಕೋಪಗಳ ಮಧ್ಯೆ ಬದುಕು ನಡೆಸುವುದು ಅಸಾಧ್ಯವಾಗುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ, ತಾನು ರೈತಪರ, ತಾನು ರೈತ ಹೋರಾಟಗಾರ ನಂಜುಂಡಸ್ವಾಮಿ ರವರ ಶಿಷ್ಯ ಎಂದು ಹೇಳಿ ಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರಸ್ತುತ ರೈತರ ಕಷ್ಟಕ್ಕೆ ಸ್ಪಂದಿಸಲು ಹಿಂದೇಟು ಹಾಕುತ್ತಿದ್ದಾರೆ. ಮುಖ್ಯ ಮಂತ್ರಿಗಳ ಈ ನಡೆ ಅತ್ಯಂತ ಅಘಾತಕಾರಿ ಬೆಳವಣಿಗೆ ಅಲ್ಲದೇ ರೈತರ ಕುರಿತು ನಿರ್ಲಕ್ಷ್ಯತನವನ್ನು ತೋರಿರುವುದು ಇಡೀ ರಾಜ್ಯಕ್ಕೆ ಮಾಡಿರುವ ಅವಮಾನವಾಗಿದೆ ಎಂದು SDPI ಜಿಲ್ಲಾಧ್ಯಕ್ಷ ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಪಕ್ಷ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸ ಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...