ಕೇರಳ ರಾಜ್ಯ ರಾಜಧಾನಿಯಲ್ಲಿ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ

Date:


ತಿರುವನಂತಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ, ಭಾರತ್ ಭವನ ತಿರುವನಂತಪುರ ಕೇರಳ ಸರಕಾರಗಳ ಆಶ್ರಯದಲ್ಲಿ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ 2025 ಶನಿವಾರ ಬೆಳಗ್ಗೆ ಕೇರಳ ರಾಜ್ಯ ರಾಜಧಾನಿಯಲ್ಲಿ ಜರಗಿತು. ತಿರುವನಂತರಪುರ ಸಿವಿ ರಾಮನ್ ಪಿಳ್ಳೆ ರಸ್ತೆ ತೈಕಾಡ್ ಭಾರತ್ ಭವನದಲ್ಲಿ ಜರಗಿದ ಕಾರ್ಯಕ್ರಮವನ್ನು ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೇರಳ ಸರಕಾರದ ಜಿ.ಆರ್. ಅನಿಲ್ ದೀಪಬೆಳಗಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿ ಬಹುಭಾಷೆಯಿಂದ ಕೂಡಿದ ಸಂಸ್ಕೃತಿಯನ್ನು ಹೊಂದಿರುವ ಜಿಲ್ಲೆ ಕಾಸರಗೋಡು. ಅಲ್ಲಿಂದ ಬಂದು ರಾಜಧಾನಿಯಲ್ಲಿ ಇಂತಹ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವುದು ಶ್ಲಾಘನೀಯ. ಮನುಷ್ಯ ಜಾತಿಯಲ್ಲಿರುವ ನಾವೆಲ್ಲ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು. ಸಂಪೂರ್ಣ ಸಾಕ್ಷರತೆಯನ್ನು ಹೊಂದಿದ ರಾಜ್ಯದಲ್ಲಿ ಇಂದು 105 ವರ್ಷದ ವ್ಯಕ್ತಿಯೂ ಆಧುನಿಕ ಕಾಲಕ್ಕೆ ಒಗ್ಗಿಗೊಂಡಿದೆ ಎಂದು ಶುಭಹಾರೈಸಿದರು. ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇದರ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಸಾಧಕರನ್ನು ಗೌರವಿಸಿ ಮಾತನಾಡಿ ಧರ್ಮ ಬೆಳಕಾದರೆ ನಾಡಿಗೂ ವಿಶ್ವಕ್ಕೂ ಬೆಳಕನ್ನು ನೀಡಲಿದೆ. ತೌಳವ ಸಂಸ್ಕೃತಿಯಲ್ಲಿ ಆರಾಧಿಸಿಕೊಂಡು ಬರುತ್ತಿರುವ ಅನಂತನ ಪದ್ಮನಾಭನ ಮಣ್ಣಿನಲ್ಲಿ ಕನ್ನಡಕ್ಕೆ ಶಕ್ತಿತುಂಬುವ ಕೆಲಸ ನಡೆಯುತ್ತಿದೆ. ಅನಂತಪುರಿಯಲ್ಲಿ ಕನ್ನಡದ ಧ್ವನಿ ಹೊರಡುತ್ತಿದೆ. ಭಾಷೆಗಳ ಸಂಸ್ಕೃತಿಗೆ ಗಡಿ ಎಂಬುದಿಲ್ಲ. ಮಾತೃಸಂಸ್ಕೃತಿಯೇ ನಮ್ಮ ಬದುಕು ಎಂದು ಅವರು ತಿಳಿಸಿದರು.
ಕರ್ನಾಟಕ ಸರಕಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಭಾವೈಕ್ಯದ ನಾಡಿನಲ್ಲಿ ನಾವಿದ್ದೇವೆ. ಇತಿಹಾಸವನ್ನು ಓದಿದವರಿಗೆ ಮಾತ್ರ ಇತಿಹಾಸವನ್ನು ಬರೆಯಲು ಸಾಧ್ಯವಿದೆ. ಕನ್ನಡವನ್ನು ಉಳಿಸಬೇಕು, ಬೆಳೆಸಬೇಕು ಎನ್ನುವ ಉದ್ದೇಶ ಕಾರ್ಯಕ್ರಮದ ಹಿಂದೆ ಇದೆ. ಕನ್ನಡ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಪ್ರಾಧಿಕಾರವು ಮುಂದುವರಿಯುತ್ತಿದೆ. ಶಾಲೆಗಳಿಗೆ ಕನ್ನಡ ದಿನಪತ್ರಿಕೆ, ಪುಸ್ತಕಗಳನ್ನು ವಿತರಿಸಲು ಯೋಜನೆಯಿದೆ ಎಂದರು.
ಭಾರತ್ ಭವನ್ ಸದಸ್ಯ ಕಾರ್ಯದರ್ಶಿ ಪ್ರಮೋದ್ ಪಯ್ಯನ್ನೂರು, ಭಾರತ್ ಭಾರತಿಯ ಸಾಧನಾ ರಾವ್, ಹಿರಿಯ ವಿದ್ವಾಂಸ ಸಂಶೋಧಕ ಡಾ.ವೀರಣ್ಣ ತುಪ್ಪದ ಹುಮಾನಾಬಾದ್ ಬೀದರ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವರೆಡ್ಡಿ ಬ್ಯಾಡೇದ, ತಿರುವನಂತಪುರ ಕರ್ನಾಟಕ ಸಂಘದ ಕಾರ್ಯದರ್ಶಿ ಡಾ. ಅನಿತ ಕುಮಾರಿ ಹೆಗಡೆ, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ ಕಾಸರಗೋಡು, ಸಮಾಜಸೇವಕ ಮಂಜುನಾಥ ಆಳ್ವ ಮಡ್ವ, ನಿವೃತ್ತ ಅಂಡರ್ ಸೆಕ್ರಟೆರಿ ಕೇರಳ ಲೋಕಸೇವಾ ಆಯೋಗದ ಗಣೇಶ್ ಪ್ರಸಾದ್ ಪಾಣೂರು, ಅನಂತಪುರಿ ಗಡಿನಾಡ ಸಾಂಸ್ಕೃತಿಕ ಉತ್ಸವದ ಪ್ರಧಾನ ಸಂಚಾಲಕ ಎ.ಆರ್. ಸುಬ್ಬಯ್ಯ ಕಟ್ಟೆ, ಪ್ರೋ.ಶ್ರೀನಾಥ್, ವಕೀಲ ಎಂ.ಎಸ್. ಥೋಮಸ್ ಡಿ.ಸೋಜ, ಝಡ್ ಎ. ಕಯ್ಯಾರು, ರಾಧಾಕೃಷ್ಣ ಕೆ.ಉಳಿಯತ್ತಡ್ಕ ಪಾಲ್ಗೊಂಡಿದ್ದರು. ಲೇಖಕ ಪತ್ರಕರ್ತ ರವಿ ನಾಯ್ಕಾಪು ನಿರೂಪಣೆಗೈದರು. ಕಾಸರಗೋಡು ಗಸಾಸಾ ಅಕಾಡೆಮಿಯ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಸ್ವಾಗತಿಸಿ, ಅಧ್ಯಕ್ಷ ಎನ್.ಚನಿಯಪ್ಪ ನಾಯ್ಕ ವಂದಿಸಿದರು. ಬಹುಭಾಷಾ ಕವಿಸಂಗಮ, ವಿಚಾರಗೋಷ್ಠಿ ನಡೆಯಿತು.

ಸಾಧಕರಿಗೆ ಗೌರವ ಸನ್ಮಾನ:
ಸಾಂಸ್ಕೃತಿಕ ಸಂಘಟಕ ಜೇಮ್ಸ್ ಮೆಂಡೋನ್ಸಾ ದುಬೈ, ನಾಟಕ ಸಿನೆಮಾ ನಿರ್ಮಾಪಕ ಸಂಘಟಕ ಲಯನ್ ಕಿಶೋರ್ ಡಿ.ಶೆಟ್ಟಿ, ತುಳುಸಂಶೋಧಕ ಎಲ್.ಆರ್.ಪೋತಿ ತಿರುವನಂತಪುರ, ಶೈಕ್ಷಣಿಕ ಕ್ಷೇತ್ರದಲ್ಲಿ ರಾಘವ ಚೇರಾಲ್, ಹೊರರಾಷ್ಟç ಕನ್ನಡ ಸಂಘಟನೆ ಶಿವಾನಂದ ಕೋಟ್ಯಾನ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಪುಸ್ತಕ ಬಿಡುಗಡೆ :
ರಾಜನ್ ಮುನಿಯೂರು ಅವರು ಬರೆದ ಪುಸ್ತಕ ತುಳುನಾಡನ್ ತುಡಿಪ್ಪುಕ್ಕಳ್ ಕೃತಿಯನ್ನು ಸಚಿವ ಜಿ.ಆರ್.ಅನಿಲ್ ಬಿಡುಗಡೆಗೊಳಿಸಿದರು.

ಡಾ. ನಾಗೇಶ್ ಮತ್ತು ನಾಗರಾಜ ಬೆಂಗಳೂರು ತಂಡದ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ವೀರಗಾಸೆ, ಚಿಲಿಪಿಲಿ ಕುಣಿತ, ಜಾನಪದ ನೃತ್ಯ, ಶಾಸ್ತಿçÃಯ ನೃತ್ಯ, ಕಥಕ್ ನೃತ್ಯ, ಮೋಹಿನಿಯಾಟ್ಟಂ, ಯಕ್ಷಗಾನ, ಕಥಕ್ಕಳಿಯು ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಜನಮನಸೂರೆಗೊಂಡಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...