“ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್? 19 ಸಾವಿರ ಮಹಿಳೆಯರಿಗೆ ಒಂದೇ ಬ್ಯಾಂಕ್ ಖಾತೆ, ಸಿಎಜಿ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು!

Date:

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಅಕ್ರಮಗಳು ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮಹಾಲೇಖಪಾಲರ (CAG) ಡೇಟಾ ವಿಶ್ಲೇಷಣೆಯಲ್ಲಿ ಹಲವು ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ.ವರದಿಯ ಪ್ರಕಾರ, 19,020 ಫಲಾನುಭವಿಗಳು ಒಂದೇ ಬ್ಯಾಂಕ್ ಖಾತೆ ಸಂಖ್ಯೆಯನ್ನು ಬಳಸಿರುವುದು ಪತ್ತೆಯಾಗಿದೆ. ಇದರಿಂದ ಯೋಜನೆಯಡಿ ಬಿಡುಗಡೆಯಾಗುತ್ತಿರುವ ಹಣದ ಪಾವತಿ ಮತ್ತು ಹಂಚಿಕೆ ಪ್ರಕ್ರಿಯೆ ಬಗ್ಗೆ ಪ್ರಶ್ನೆಗಳು ಮೂಡಿವೆ.ಇದರ ಜೊತೆಗೆ, 23,262 ಖಾತೆಗಳಿಗೆ ಬ್ಯಾಂಕ್ ಖಾತೆ ವಿವರಗಳೇ ಇಲ್ಲದೆ ಸುಮಾರು 46.52 ಕೋಟಿ ರೂಪಾಯಿ ಪಾವತಿಯಾಗಿರುವುದು ವರದಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಹಾಲೇಖಪಾಲರ ಕಚೇರಿ ಸ್ಪಷ್ಟನೆ ಕೋರಿದೆ.

ಡೇಟಾ ವಿಶ್ಲೇಷಣೆಯಲ್ಲಿ ಮತ್ತೊಂದು ಅಂಶ ಬೆಳಕಿಗೆ ಬಂದಿದ್ದು, ಕೆಲವು ಫಲಾನುಭವಿಗಳು ಪದೇಪದೇ ಬ್ಯಾಂಕ್ ಖಾತೆಗಳನ್ನು ಬದಲಾಯಿಸಿರುವುದು ಕಂಡುಬಂದಿದೆ. ಈ ರೀತಿಯ 10,06,308 ಖಾತೆ ಬದಲಾವಣೆ ದಾಖಲೆಗಳು ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.ಯೋಜನೆಯಡಿ ಇದುವರೆಗೆ 30 ಕಂತುಗಳನ್ನು ಪಾವತಿಸಲಾಗಿದ್ದು, ಕೆಲವು ನಿರ್ದಿಷ್ಟ ಅವಧಿಗಳಲ್ಲಿ ಸುಮಾರು 1.80 ಕೋಟಿ ರೂಪಾಯಿಯನ್ನು 8,995 ಖಾತೆಗಳಿಗೆ ಪುನಃ ಪಾವತಿ ಮಾಡಲಾಗಿದೆ ಎನ್ನಲಾಗಿದೆ.

ಮಹಾಲೇಖಪಾಲರ ಕಚೇರಿಯಿಂದ ಹಲವು ಬಾರಿ ಮಾಹಿತಿ ಕೋರಿದರೂ ಅಗತ್ಯ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತಕ್ಷಣವೇ ಸಂಪೂರ್ಣ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದ್ದಾರೆ.2023-24ರಲ್ಲಿ 18,103.88 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಆರಂಭವಾದ ಗೃಹಲಕ್ಷ್ಮಿ ಯೋಜನೆಯ ವೆಚ್ಚವು ಫಲಾನುಭವಿಗಳ ಸಂಖ್ಯೆ ಹೆಚ್ಚಿದಂತೆ ಏರಿಕೆಯಾಗುತ್ತಿದ್ದು, ಮುಂದಿನ ಕಂತುಗಳ ಪಾವತಿಯೊಂದಿಗೆ ಒಟ್ಟು ವೆಚ್ಚ 75 ಸಾವಿರ ಕೋಟಿ ರೂಪಾಯಿ ಗಡಿ ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಆದರೆ ಈ ಎಲ್ಲಾ ಅಂಶಗಳ ಕುರಿತು ಸಂಬಂಧಿತ ಇಲಾಖೆಯ ಅಧಿಕೃತ ಸ್ಪಷ್ಟನೆ ಇನ್ನಷ್ಟೇ ಹೊರಬರಬೇಕಿದ್ದು, ತನಿಖೆ ಮತ್ತು ಪರಿಶೀಲನೆ ಬಳಿಕವೇ ಅಂತಿಮ ಸತ್ಯಾಂಶ ಹೊರಬೀಳಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು: ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ...

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ

ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ...

ನಾಳೆ (ಜೂನ್ 24) ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಬಂದ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಚಾಲಕರಿಗೆ ಅನ್ಯಾಯ...

ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಜೂನ್ 25ರಂದು ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು...