ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಗೊಂದಲ – ಅಕೀಮ್ ಕೂರ್ನಡ್ಕ ಆಸ್ಪತ್ರೆಗೆ ದಾಖಲು

Date:


ಪುತ್ತೂರು: ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಉಂಟಾದ ಗೊಂದಲ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕೀಮ್ ಕೂರ್ನಡ್ಕ ಅವರು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಅಕೀಮ್ ಕೂರ್ನಡ್ಕ ಅವರು ತಮ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಂಡಿಸುತ್ತಿದ್ದ ವೇಳೆ, ಪುತ್ತೂರು ಶಾಸಕ ಅಶೋಕ್ ರೈ ಅವರ ಬೆಂಬಲಿಗರು ಎಂದು ಹೇಳಲಾಗುತ್ತಿರುವ ಕೆಲವರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಉಂಟಾದ ಒತ್ತಡ ಹಾಗೂ ಉದ್ವಿಗ್ನ ಪರಿಸ್ಥಿತಿಯಿಂದ ಅಕೀಮ್ ಕೂರ್ನಡ್ಕ ಅವರು ಅಸ್ವಸ್ಥರಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಗಮನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೇತುವೆ ಕುಸಿತ: ತಕ್ಷಣ ಸ್ಪಂದಿಸಿದ ಬಜ್ಪೆ ನಾಗರಿಕರಕ್ಷಣಾ ವೇದಿಕೆ – ಎರಡು ದಿನಗಳಲ್ಲಿ ಪರ್ಯಾಯ ರಸ್ತೆ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

ಬಜ್ಪೆ, ಮಂಗಳೂರು–ಬಜ್ಪೆ–ಕಟ್ಟೀಲ್ ರಾಜ್ಯ ಹೆದ್ದಾರಿಯ ಕರಬಾರು ಸಮೀಪದಲ್ಲಿರುವ ಸೇತುವೆ ಕುಸಿದು ವಾಹನ...

ಸೆ.ಬಂಟ್ಸ್ ಹಾಸ್ಟೆಲ್, ಶ್ರೀ ರಾಮಕೃಷ್ಣ ಶಾಲಾ ಮೈದಾನದಲ್ಲಿ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು...

ಕಣಚೂರು ಫಾರ್ಮಸಿ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ದೇರಳಕಟ್ಟೆ: ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಅಧೀನದ ಕಣಚೂರು ಕಾಲೇಜ್ ಆಫ್...