ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ ‌ಹಾಗೂ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Date:


ಉಳ್ಳಾಲ: ಅಭಿವೃದ್ಧಿ ನಮ್ಮ ಗುರಿ ಆಗಿದ್ದು, ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆದು ಅಭಿವೃದ್ಧಿ ಕಡೆ ಹೆಜ್ಜೆ ಇಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಅವರು ಉಳ್ಳಾಲ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ ‌ಹಾಗೂ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.


ವಿದ್ಯಾರ್ಥಿ ಜೀವನದಲ್ಲಿ ಒಂದು ಗುರಿ ಯನ್ನು ಇಟ್ಟುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಶಿಕ್ಷಣ ಮುಂದುವರಿಸಿ ಒಂದು ಹಂತಕ್ಕೆ ತಲುಪಲು ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು ಎಂದರು.
ಸಯ್ಯಿದ್ ಮಸೂದ್ ತಂಙಳ್ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಗೈದು ದುಆ ನೆರವೇರಿಸಿದರು.ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.


ಈ ಕಾರ್ಯಕ್ರಮ ದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್,ದರ್ಗಾ ಮಾಜಿ ಅಧ್ಯಕ್ಷ ಹಂಝ, ಹಾಲಿ ಸದಸ್ಯ ಝೈನುದ್ದೀನ್ ಮೇಲಂಗಡಿ, ವಕ್ಫ್ ಅಧಿಕಾರಿ ಅಬೂಬಕ್ಕರ್ , ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಕಾರ್ಯದರ್ಶಿ ಮುಸ್ತಫಾ, ಮಾಜಿ ಅಧ್ಯಕ್ಷ ಕಣಚೂರು ಮೋನು, ಚೆರೆ ಮೋನು, ಅಬ್ದುಲ್ ಖಾದರ್, ಅಬ್ಬಾಸ್ ಕೋಡಿ,ಝಿಯಾದ್ ತಂಙಳ್ ಮೊಯ್ದಿನ್ ಕಲ್ಲಾಪು, ಖಲೀಲ್, ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಪ್ರಾಂಶುಪಾಲ ರಸೂಲ್ ಖಾನ್,
ಅಲ್ತಾಫ್ ,ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಮತ್ತಿತರರು ಉಪಸ್ಥಿತರಿದ್ದರು. ಕೆ.ಏಮ್ ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...