ಕಾಡುಮಠ ಪ್ರಾಥಮಿಕ ಶಾಲೆಗೆ ಸ್ವಚ್ಚ ನೀರಿನ ಘಟಕ ಕೊಡುಗೆ

Date:

ಬಂಟ್ವಾಳ: ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಮುಖ್ಯೋಪಾಧ್ಯಾಯಯರು ಕೊಳ್ನಾಡು ಗ್ರಾ.ಪಂಚಾಯತ್ ಉಪಾದ್ಯಕ್ಷರಾದ ಕೆ.ಎ.ಅಸ್ಮ ಹಸೈನಾರ್ ಅವರಿಗೆ ಸ್ವಚ್ಚನೀರಿನ ಘಟಕ ನೀಡಲು ಮನವಿ ಸಲ್ಲಿಸಿದ್ದರು.ಮನವಿಗೆ ಸ್ಪಂದಿಸಿ ಸಮಾಜಿಕ ಮುಖಂಡರೂ,ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಸದಸ್ಯರಾದ ಹಸೈನಾರ್ ತಾಳಿತ್ತನೂಜಿ ಸಹಕಾರದಿಂದ ಸಂಘ ಸಂಸ್ಥೆಯೊಂದರ ಮುಖಾಂತರ ಸ್ವಚ್ಚನೀರಿನ ಘಟಕವನ್ನು ಇಂದು ಹಸ್ತಾಂತರಿಸಲಾಯಿತು.ಇದರ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಮನ್ವಿತ್ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಕೊಳ್ನಾಡು ಗ್ರಾ.ಪಂಚಾಯತ್ ಅದ್ಯಕ್ಷರಾದ ಅಶ್ರಪ್ ಕೆ‌.ಸಾಲೆತ್ತೂರು, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅದ್ಯಕ್ಷರಾದ ಆರಿಪ್ ಕರೈ, ಅನುಗ್ರಹ ಕಾಲೇಜು ಟ್ರಸ್ಟಿ ಹೈದರ್ ನೀರ್ಕಜೆ, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಅದ್ಯಕ್ಷರಾದ ಶ್ವೇತಾ ಮೇಡಂ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಸ್ಮ ಹಸೈನಾರ್, ಕಾಡುಮಠ ಶಾಲೆಯ ಹಳೆವಿದ್ಯಾರ್ಥಿ ಸಂಘದ ಹಪೀಝ್ ಸಾಲೆತ್ತೂರು, ಅನುಗ್ರಹ ಕಾಲೇಜು ಉಪನ್ಯಾಸಕಿ ರಾಬೀಯ, ಶಾಲಾಬಿವೃದ್ದಿ ಸಮಿತಿಯ ಸದಸ್ಯರಾದ ಇಕ್ಬಾಲ್ ಬಸಬೆಟ್ಟು, ಖಾದರ್ ಸಾಲೆತ್ತೂರು, ಶಿಕ್ಷಕಿಯರಾದ ಶಶಿ.ಬಿ, ಪುಷ್ಪಾವತಿ, ಕೀರ್ತಿ. ಕೆ,ಧನ್ಯ ಕೆ., ಗೌರವ ಶಿಕ್ಷಕಿ ಸೆಕಿನ ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಪ್ರಬಾರ ಮುಖ್ಯ ಶಿಕ್ಷಕಿ ಕುಸುಮ ಸ್ವಾಗತಿಸಿ, ಲತಾ ಎಸ್.  ಧನ್ಯವಾದ ತಿಳಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...