ಕೈರಂಗಳದಲ್ಲಿ ಯಕ್ಷಧಾರೆ ಯಕ್ಷಗಾನ ಕಾರ್ಯಕ್ರಮ

Date:

ಉಳ್ಳಾಲ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಆಶ್ರಯದಲ್ಲಿ ‘ಯಕ್ಷಧಾರೆ’ ಯಕ್ಷಗಾನ ಕಾರ್ಯಕ್ರಮ ಸೆ.14ರಂದು, ಕೈರಂಗಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆಯಲಿದೆ. 9.30ಕ್ಕೆ ಯಕ್ಷ ಗುರು ಸಬ್ಬಣಕೋಡಿ ರಾಮಭಟ್ ಉದ್ಘಾಟಿಸಲಿದ್ದಾರೆ. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ದಿ.ಬರೆ ಕೇಶವ ಭಟ್ ಸಂಸ್ಮರಣೆ ನಡೆಯಲಿದೆ. 10.30ಕ್ಕೆ ಯಕ್ಷವಾಚಿಕ, ಯಕ್ಷ ಆಹಾರ್ಯ ಪ್ರಸ್ತುತಿ ನಡೆಯಲಿದೆ. ಮಧ್ಯಾಹ್ನ 2ರಿಂದ ಮೋಕ್ಷ ಸಂಗ್ರಾಮ ಬಡಗುತಿಟ್ಟು ಯಕ್ಷಗಾನ ನಡೆಯಲಿದೆ. ಸಂಜೆ 5ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಆಶೀರ್ವಚನ ನೀಡಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್, ಮಾನವ ಹಕ್ಕು ಆಯೋಗದ ಅಧ್ಯಕ್ಷ ಡಾ.ಟಿ.ಶಾಮ ಭಟ್, ಪ್ರಮುಖರಾದ ಟಿ.ಜಿ.ರಾಜಾರಾಮ ಭಟ್, ಪುಂಡರೀಕಾಕ್ಷ ಯು.ಮೂಲ್ಯ ಉಪಸ್ಥಿತರಿರುತ್ತಾರೆ. ಬಳಿಕ ಪ್ರಸಿದ್ಧ ಕಲಾವಿದರಿಂದ ಚಕ್ರವ್ಯೂಹ-ವೀರಮಣಿ ಕಾಳಗ ತೆಂಕುತಿಟ್ಟು ಯಕ್ಷಗಾನ ನಡೆಯಲಿದೆ ಎಂದು ಅಕಾಡೆಮಿ ಸದಸ್ಯ ಗುರುರಾಜ್ ಭಟ್ ಕೈರಂಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...