ಕನ್ನಡದ ಸಾಮರಸ್ಯದ ನೆಲೆಗಳು: ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ – ಮಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ

Date:

ಮಂಗಳೂರು: ದಿನಾಂಕ 13/04/2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗುತ್ತಿರುವ ಮಹತ್ವದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ. ಈ ಪುಸ್ತಕಗಳು ಕರ್ನಾಟಕದ ಸಾಮರಸ್ಯ ಸಂಸ್ಕೃತಿ, ಬಹುಮುಖ ಪರಂಪರೆ ಹಾಗೂ ವೈವಿಧ್ಯತೆಯೊಳಗಿನ ಏಕತೆಯನ್ನು ಪ್ರತಿಬಿಂಬಿಸುವ ಅಮೂಲ್ಯ ಕೃತಿಗಳಾಗಿವೆ.

ಈ ಮಹತ್ವದ ಕಾರ್ಯಕ್ರಮದ ಸಿದ್ಧತೆಗಳ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯು ಪ್ರಾಧಿಕಾರದ ಅಧ್ಯಕ್ಷರಾದ ಡಾ‌. ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸದಸ್ಯರೊಂದಿಗೆ ಭಾಗವಹಿಸಿ, ಕಾರ್ಯಕ್ರಮದ ರೂಪುರೇಷೆಗಳು, ಪುಸ್ತಕಗಳ ಮಹತ್ವ ಹಾಗೂ ಜನಸಾಮಾನ್ಯರಿಗೆ ತಲುಪಿಸುವ ವಿಧಾನಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಸಮಿತಿ ಸದಸ್ಯರಾದ ಡಾ. ರಾಜೇಶ್ ಕದ್ರಿ, ದಿವಾಕರ ದಾಸ್ ಕಾವಲಕಟ್ಟೆ, ದೇವಿಪ್ರಸಾದ್ ಬೆಳ್ತಂಗಡಿ, ಹಸೈನಾರ್ ತಾಳಿತ್ತನೂಜಿ ಕೊಳ್ನಾಡು, ರೆಹಮಾನ್ ಖಾನ್ ಕುಂಜತ್ತಬೈಲ್, ಯು.ಎಚ್.ಖಾಲಿದ್ ಉಜಿರೆ, ಶ್ರೀಮತಿ ಸುಜಾತ ದೀಪಕ್, ಶ್ರೀಮತಿ ಶಾಂತ ಎಸ್.ರಾವ್ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಇಲಾಖೆಯ ರಾಜೇಶ್ ಸ್ವಾಗತಿಸಿ, ದಿವಾಕರ ದಾಸ್ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...