ಕರ್ನಾಟಕ ರಾಜ್ಯ ಯೂತ್ ಲೀಗಿಗೆ ನೂತನ ಸಾರಥ್ಯ

Date:

ಬೆಂಗಳೂರು: ಮುಸ್ಲಿಂ ಯೂತ್ ಲೀಗ್ ರಾಷ್ಟ್ರೀಯ ಸಮಿತಿಯು ಸಂಘಟನೆಯ ಬಲವರ್ಧನೆ ಅಭಿಯಾನದ ಭಾಗವಾಗಿ, ಕರ್ನಾಟಕ ರಾಜ್ಯ ಯೂತ್ ಲೀಗ್ ಸಮಿತಿಯನ್ನು ಪುನರ್ರಚಿಸಲಾಗಿದೆ. ಬೆಂಗಳೂರಿನ ಶಿಹಾಬ್ ತಂಙಳ್ ಸೆಂಟರ್‌ನಲ್ಲಿ ನಡೆದ ಕೌನ್ಸಿಲ್ ಸಭೆಯನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಟಿ.ಪಿ. ಅಶ್ರಫಲಿ ಉದ್ಘಾಟಿಸಿದರು.
​ಎಸ್.ಐ.ಆರ್. ಮೂಲಕ ಭಾರತದ ಮುಸ್ಲಿಂ ಹಿಂದುಳಿದ ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿ ನಂತರ ಅವರಿಗೆ ಪೌರತ್ವವನ್ನು ನಿರಾಕರಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಆಯೋಗದೊಂದಿಗೆ ಸೇರಿ ನಡೆಸುತ್ತಿರುವ ರಹಸ್ಯ ಕಾರ್ಯಾಚರಣೆ ಇದು ಎಂದು ಅಶ್ರಫಲಿ ಹೇಳಿದರು. ಇದನ್ನು ವಿರೋಧಿಸಿ ಭಾರತದ ಪರಂಪರೆಯನ್ನು ಎತ್ತಿಹಿಡಿಯುವ ಪ್ರತಿಕ್ರಿಯೆಗಳು ದೇಶಾದ್ಯಂತ ಕಾಣಸಿಗುತ್ತಿದ್ದು, ಇಂತಹ ಪ್ರತಿಭಟನೆಗಳಿಗೆ ಬೆಂಬಲವಾಗಿ ಯೂತ್ ಲೀಗ್ ರಾಷ್ಟ್ರೀಯ ಸಮಿತಿಯು ದೆಹಲಿಯಲ್ಲಿ “ವೋಟ್ ಚೋರಿ” ಪ್ರತಿಭಟನೆಯನ್ನು ನಡೆಸಿದೆ. ಬಿಹಾರದ ಕಿಶನ್‌ಗಂಜ್ ಸೇರಿದಂತೆ ಯೂತ್ ಲೀಗ್ ಘೋಷಿಸಿದ ಹೋರಾಟವೂ ಇದರ ಭಾಗವಾಗಿದೆ ಎಂದು ಅವರು ತಿಳಿಸಿದರು. ದಸ್ತಗೀರ್ ಬೇಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
​ಕರ್ನಾಟಕ ರಾಜ್ಯದ ಉಸ್ತುವಾರಿ ವಹಿಸಿರುವ ರಾಷ್ಟ್ರೀಯ ಕಾರ್ಯದರ್ಶಿ ಸಾಜಿದ್ ನಡುಮಾಣೂರು ಅವರು ಸಮಿತಿ ಚುನಾವಣೆಯನ್ನು ನಿಯಂತ್ರಿಸಿದರು. ಯೂತ್ ಲೀಗ್ ರಾಷ್ಟ್ರೀಯ ಉಪಾಧ್ಯಕ್ಷ ಇನಾಂದಾರ್ ಧಾರವಾಡ, ಕಾರ್ಯದರ್ಶಿ ಸಿ.ಕೆ. ಶಾಕೀರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...