
ಕೊಣಾಜೆ: ಇಂದಿನ ಆಧುನಿಕತೆಯಲ್ಲಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ಕಾರ್ಯ ಆಗಬೇಕಿದೆ. ಯುವ ಸಮುದಾಯ ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಡಾ.ಸಿ.ಎಚ್ ಬಾಲಕೃಷ್ಣ ಅವರು ಹೇಳಿದರು.
ಅವರು ಕೊಣಾಜೆ ಶಾರದಾನಗರದ ಸಪ್ತಸ್ವರ ಕಲಾ ತಂಡ (ರಿ) ಕೊಣಾಜೆ,ಸಪ್ತಸ್ವರ ಕಲಾತಂಡ ಸೇವಾ ಟ್ರಸ್ಟ್ ಹಾಗೂ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಸೋಮವರ ನಡೆದ ಶಾರದೋತ್ಸವ ಸಮಾರಂಭದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಕಿರಣ್ ಕೋಡಿಕಲ್ ಅವರು, ಹಿರಿಯರು ಪಾಲಿಸಿಕೊಂಡು ಬಂದ ಆಚರಣೆ, ಸಂಪ್ರದಾಯ, ಕಟ್ಟುಪಾಡುಗಳನ್ನು ಅರ್ಥೈಸಿಕೊಂಡು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಿದೆ. ಕೊಣಾಜೆಯ ಸಪ್ತಸ್ವರ ಕಲಾತಂಡವು ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯರಾದ ಮುತ್ತು ಎನ್ ಶೆಟ್ಟಿ ಅವರಿಗೆ ಗ್ರಾಮ ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಹೇಮಲತಾ ದಿನೇಶ್, ಶಿಕ್ಷಕರಾದ ಚಂದ್ರಶೇಖರ್ ಸಿ.ಎಚ್, ವಿಜೇತ್ ಶೆಟ್ಟಿ ಮಂಜನಾಡಿ ಹಾಗೂ ಶೈಕ್ಷಣಿಕ ಸಾಧಕರಾದ ವಂಶಿ ಗಟ್ಟಿ, ಭುವಿತ, ನಿಶಾ ಅಂಜುಮ್ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಪುರಂದರ ಆರ್ಯಾಪು, ಬಿಜೆಪಿ ಮಂಡಲ ಅಧ್ಯಕ್ದರಾದ ಜಗದೀಶ್ ಆಳ್ವ ಕುವೆತ್ತಬೈಲ್, ಶಾರದೋತ್ಸವ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಯುವ ಉದ್ಯಮಿ ಜಗದೀಶ್ ಪಲಾಯಿ, ಸಾಮಾಜಿಕ ಕಾರ್ಯಕರ್ತ ಯಶುಪಕ್ಕಳ ತಲಪಾಡಿ, ಕೈರಂಗಳ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಚಂದ್ರಶೇಖರ್ ಮುದುಂಗಾರುಕಟ್ಟೆ, ಗೌರವಾಧ್ಯಕ್ಷರಾದ ರವೀಂದ್ರ ರೈ ಕಲ್ಲಿಮಾರ್, ಮುಖಂಡರಾದ ಮಂಜುನಾಥ ಮಾಣೈ, ನವೀನ್ ರೈ ಸಂಪಿಲ, ಭುವನೇಶ್ವರಿ ಮಾತೃ ಮಂಡಳಿಯ ಅಧ್ಯಕ್ಷರಾದ ಸುಮಂಗಲ, ಸಪ್ತಸ್ವರ ಕಲಾ ತಂಡದ ಅಧ್ಯಕ್ಷರಾದ ರಿತೇಶ್ ಶೆಟ್ಟಿ, ಸಪ್ತಸ್ವರ ಸೇವಾ ಟ್ರಸ್ಟ್ ನ ಅಧ್ಯಕ್ಣರಾದ ಸುರೇಂದ್ರ ಬೊಳ್ಳಕುಮೇರು ಮೊದಲಾದವರು ಉಪಸ್ಥಿತರಿದ್ದರು.
ಸಪ್ತಸ್ವರ ಕಲಾತಂಡದ ದೀಕ್ಷಿತ್ ಸ್ಬಾಗತಿಸಿದರು. ಪ್ರವೀಣ್ ಕುರ್ನಾಡು ವಂದಿಸಿದರು. ಭಾಸ್ಕರ ನಾಟೆಕಲ್ ಅವರು ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಕೊಣಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.



