ಮಾಂಟ್ರಾಡಿಯಲ್ಲಿ ಟ್ರ್ಯಾಕ್ಟರ್ ಸಹಿತ ಯುವಕ ಬಾವಿಗೆ ಬಿದ್ದು ಸಾವು

Date:

ಮೂಡುಬಿದಿರೆ : ಪಕ್ಕದ ಮನೆಯವರ ಟ್ರ್ಯಾಕ್ಟರ್ ನ್ನು ರಿವಸ್ ೯ ತೆಗೆಯಲು ಹೋಗಿ ಯುವಕನೊಬ್ಬ ವಾಹನ ಸಹಿತ ಬಾವಿಗೆ ಬಿದ್ದು ಸಾವನ್ನಪ್ಪಿದ ದುಘ೯ಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೊಂಬೆಟ್ಟು ನಿವಾಸಿ ರಾಜೇಶ್ (38)ಮೃತ ದುರ್ದೈವಿ.​ ರಾಜೇಶ್ ಅವರು ತಮ್ಮ ಮನೆಯ ಪಕ್ಕದಲ್ಲಿರುವ ಸಂಬಂಧಿಕರ ವಾಹನವನ್ನು (ಗಾಡಿಯನ್ನು) ಬಾವಿಯ ಸಮೀಪ ತೊಳೆಯುತ್ತಿದ್ದರು. ಈ ಸಂದರ್ಭದಲ್ಲಿ ವಾಹನವು ರೋಲ್ ಆಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿತು. ವಾಹನವನ್ನು ಹಿಡಿದು ನಿಲ್ಲಿಸಲು ಹೋಗಿ, ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.​ರಾಜೇಶ್ ಅವರು ಪತ್ನಿ ಮತ್ತು ಇಬ್ಬರು ಪುಟ್ಟ ಪುತ್ರಿಯರನ್ನು ಅಗಲಿದ್ದಾರೆ. ಈ ಅಕಾಲಿಕ ಸಾವಿಗೆ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...