ಮಂಗಳೂರು ವಿವಿ ಕುಲಪತಿಪ್ರೊ.ಪಿ.ಎಲ್ ಧರ್ಮ ಇಂಗ್ಲೆಂಡಿಗೆ ಪ್ರವಾಸ

Date:

ಮಂಗಳಗಂಗೋತ್ರಿ: ಬ್ರಿಟಿಶ್ ಕೌನ್ಸಿಲ್ ಲಂಡನ್ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದೊಂದಿಗೆ ಸೆಪ್ಟೆಂಬರ್ 13 ರಿಂದ 25 ರವರೆಗೆ ಇಂಗ್ಲೆಂಡಿನಲ್ಲಿ ನಡೆಯಲಿರುವ ಕರ್ನಾಟಕ ಲೀಡರ್ ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂನಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ‌ ಪ್ರೊ. ಪಿ.ಎಲ್ ಧರ್ಮ ಅವರು ತೆರಳಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾದ ಪ್ರೊ. ಎಸ್ ಕೆ ನಿರಂಜನ ಇವರ ನೇತೃತ್ವದಲ್ಲಿ ಇಂಗ್ಲೇಂಡಿಗೆ ತೆರಳುತ್ತಿರುವ 10 ಪ್ರತಿನಿಧಿಗಳ ಈ ತಂಡದಲ್ಲಿ ಪ್ರೊ.ಪಿ.ಎಲ್ ಧರ್ಮ ಇವರು ಭಾಗಿಯಾಗಿದ್ದಾರೆ. ಎರಡು ವಾರಗಳ ಕಾಲ ನಡೆಯುವ ಈ ಕಾರ್ಯಕ್ರಮದ ಸಂದರ್ಭದಲ್ಲಿ ಇಂಗ್ಲೆಂಡಿನ ವಿವಿಧ ವಿಶ್ವವಿದ್ಯಾನಿಲಯಗಳಿಗೆ ಭೇಟಿಕೊಟ್ಟು ಅವರ ಜೊತೆಗೆ ಸಂವಾದ‌, ಅಲ್ಲಿನ‌ ವಿಶ್ಬವಿದ್ಯಾನಿಲಯಗಳ ಶೈಕ್ಷಣಿಕ ವ್ಯವಸ್ಥೆಯ ಅಧ್ಯಯನ, ಸಹಯೋಗದ ಕಾರ್ಯ ನಿರ್ವಹಣೆಯ ಕುರಿತ ಚರ್ಚೆ, ಒಪ್ಪಂದಗಳ ಕುರಿತು ಮಾತುಕತೆ ಇತ್ಯಾದಿಗಳನ್ನು ನಡೆಸಲಿದ್ದಾರೆ.
ಅಧ್ಯಯನ ತಂಡದಲ್ಲಿ ಮಂಗಳೂರು ವಿವಿಯಲ್ಲದೆ ಮೈಸೂರು, ಧಾರವಾಡ, ದಾವಣಗೆರೆ ವಿವಿಗಳ, ಉನ್ನತ ಶಿಕ್ಷಣ ಪರಿಷತ್ತಿನ ಪ್ರತಿನಿಧಿಗಳು, ಅಧಿಕಾರಿಗಳು, ಇಂಗ್ಲೆಂಡಿನ ಬ್ರಿಟಿಷ್ ಕೌನ್ಸಿಲ್, ಕಾರ್ಡಿಫ್, ಬ್ಯಾಂಗೋರ್, ರೆಕ್ಸಾಂ, ಕಾರ್ಡಿಫ್ ಮೆಟ್ರೋಪೊಲಿಟನ್,ವೇಲ್ಸ್ ಟ್ರಿನಿಟಿ ಸೈಂಟ್ ಡೇವಿಡ್ ವಿಶ್ವವಿದ್ಯಾನಿಲಯಗಳ ಹಿರಿಯ ಪ್ರಾಧ್ಯಾಪಕರು, ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಿಂದ ಮುಂದಿನ ದಿನಗಳಲ್ಲಿ ಸಂಶೋಧನೆ, ನಾಯಕತ್ವ ಹಾಗೂ ಶೈಕ್ಷಣಿಕ ಚಟುವಟಿಕೆಗಳು ರಾಜ್ಯದ ವಿಶ್ವವಿದ್ಯಾನಿಲಯಗಳ ನಡುವೆ ವೃದ್ಧಿಯಾಗಬಹುದೆಂದು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...