ಮಂಗಳೂರು ವಿವಿ: ಸಭಾಂಗಣ ಉದ್ಘಾಟನೆ ಹಾಗೂ ಕಾರಂತ‌ರ ನೆನಪು ಕಾರ್ಯಕ್ರಮ ಕಾರಂತರ ಮೇಲೆ ಗಾಂಧಿ ಪ್ರಭಾವ : ವಿವೇಕ ರೈ

Date:

ಕೊಣಾಜೆ:ಬಾಲ್ಯದಲ್ಲಿ ಕಾರಂತರ ಮೇಲೆ ಗಾಂಧಿ ಮಹತ್ವದ ಪ್ರಭಾವವನ್ನು ಬೀರಿದ್ದರು. ಗಾಂಧಿ ತತ್ವದ ಪ್ರಚಾರಕ್ಕಾಗಿ ಅವರು ದಲಿತ ಕೇರಿಗಳಿಗೆ ಹೋಗಿ ನಾಟಕ ಆಡೋದು, ಸ್ವಾತಂತ್ರ್ಯ ಕಲ್ಪನೆಯನ್ನು ಬಿತ್ತುತ್ತಿದ್ದರು. ಆಗ ದಲಿತ ಬದುಕನ್ನು ಹತ್ತಿರದಿಂದ ಕಂಡುದು ಚೋಮನದುಡಿ ಕಾದಂಬರಿಗೆ ಪ್ರೇರಣೆಯಾಯಿತು ಎಂದು ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು.

ಅವರು ಮಂಗಳೂರು ವಿವಿ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನೂತನ ಸಭಾಂಗಣದ ಉದ್ಘಾಟನೆ ಮತ್ತು ಡಾ.ಕೆ.ಶಿವರಾಮ‌ ಕಾರಂತ ಜನ್ಮದಿನಾಚರಣೆ ‘ಕಾರಂತರ ನೆನಪು’ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಶಿವರಾಮ ಕಾರಂತರ ಪುಸ್ತಕ ಓದುವಿಕೆ, ಪ್ರವಾಸ, ಸೂಕ್ಷ್ಮಗ್ರಹಣ ಶಕ್ತಿಗಳು ಅವರನ್ನು ಎತ್ತರಕ್ಕೆ ಏರಿಸಿತ್ತು. ಅವರ ಅನುಭವಗಳು ನಮಗೆಲ್ಲರಿಗೂ ದಾರಿ ದೀಪವಾಗಿವೆ. ಶಿಕ್ಷಣ ಸಂಸ್ಥೆಗಳು ಎಂದಿಗೂ ಗೋಡೆಗಳಾಗದೆ ವಿಸ್ತಾರತೆಯೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಬೇಕು ಎಂದರು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕನ್ನಡ ವಿಭಾಗದ ಆರಂಭದಿಂದ ಪ್ರಾಧ್ಯಾಪಕರಾಗಿ, ಸಾಹಿತಿಯಾಗಿ ಅನೇಕ ರೀತಿಯ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಪ್ರೊ.ವಿವೇಕ್ ರೈ ಅವರ ಹೆಸರು ಶಾಶ್ವತವಾಗಿರಬೇಕು ಎಂಬ ಈ ನಿಟ್ಟಿನಲ್ಲಿ ಈ ನೂತನ ಸಭಾಂಗಣಕ್ಕೆ‌ ‘ವಿವೇಕ ರೈ ವಿಚಾರ ವೇದಿಕೆ’ ಎಂದು ಹೆಸರಿಡಲಾಗುವುದು ಎಂದು ಘೋಷಿಸಿದರು. ಹಾಗೆಯೇ ಈ ವೇದಿಕೆಯು ಎಲ್ಲಾ ರೀತಿಯ ಕಾರ್ಯಕ್ರಮ, ವಿಚಾರಗಳಿಗೆ ವೇದಿಕೆಯಾಗಲಿದೆ ಎಂದರು. ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ನಾಗಪ್ಪ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿವರಾಮ ಕಾರಂತರು ಬದುಕಿದ ರೀತಿ, ನಡೆದ ದಾರಿ ವಿಭಿನ್ನವಾದುದು ಮತ್ತು ಸಾಹಿತ್ಯಾಸಕ್ತರಿಗೆ ಪ್ರೇರಣದಾಯಕರಾಗಿದ್ದಾರೆ. ಅವರ ಜನ್ಮದಿನದಂದೇ ನೂತನ ಸಭಾಂಗಣ ಉದ್ಘಾಟನೆಗೊಂಡಿರುವುದು ಸಂತಸದ‌ ಕ್ಷಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸರಾದ ಪ್ರೊ. ಕೆ.ಚಿನ್ನಪ್ಪ ಗೌಡ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶಿವರಾಮ ಶೆಟ್ಟಿ, ಹಿರಿಯರಾದ ಡಾ.ಭಾಸ್ಕರ ರೈ ಕುಕ್ಕುವಳ್ಳಿ, ರವೀಂದ್ರ ರೈ ಕಲ್ಲಿಮಾರ್, ವಾಸುದೇವ ಉಚ್ಷಿಲ, ಪ್ರಾಧ್ಯಾಪಕರಾದ ಪ್ರೊ.ಸೋಮಣ್ಣ, ಡಾ.ಪ್ರಕಾಶ್ಚಂದ್ರ ಶಿಶಿಲ, ಇಸ್ಮಾಯಿಲ್, ಮಂಗಳೂರು ವಿವಿ ಇಂಜಿನಿಯರ್ ಸಂತೋಷ್ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.‌ಸಹಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ವಂದಿಸಿದರು. ಡಾ.ಯಶುಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು.

ವಿವೇಕ ರೈ ವಿಚಾರ ವೇದಿಕೆ’ಎಸ್ ವಿಪಿ ಕನ್ನಡದ ಸಂಸ್ಥೆಯಲ್ಲಿ ಉದ್ಘಾಟನೆಗೊಂಡ ನೂತನ ಸಭಾಂಗಣದ‌ ‘ವಿವೇಕ್ ರೈ ವಿಚಾರ‌ವೇದಿಕೆ’ಯು ಹೊಸ ಆಲೋಚನೆಗಳಿಗೆ, ವಿವಿಧ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳಿಗೆ ವೇದಿಕೆಯಾಗಲಿ. ಸಾಹಿತ್ಯ ಸಂಸ್ಕೃತಿಯು ಶ್ರೀಮಂತಗೊಳ್ಳಲಿ.

-ಪ್ರೊ.ಪಿ.ಎಲ್.ಧರ್ಮಕುಲಪತಿ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...