ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ.ಬಿ.ಎಸ್. ಮಂಜುನಾಥ ಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ, ಪರೀಕ್ಷಾಂಗ ಕುಲಸಚಿವರಾದ ಪ್ರೊ.ದೇವೇಂದ್ರಪ್ಪ, ಪ್ರೊ.ಗಣೇಶ್ ಸಂಜೀವ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಎಎಸ್ ಅಧಿಕಾರಿಯಾಗಿರುವ ಇವರು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ಇದರ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದರು. ರಾಜು ಮೊಗವೀರ ಅವರು ನಿವೃತ್ತಿಯಾದ ಬಳಿಕ ಪ್ರಭಾರ ಕುಲಸಚಿವರಾಗಿ ಪ್ರೊ.ಗಣೇಶ್ ಸಂಜೀವ್ ಅವರು ಇಲ್ಲಿಯವರೆಗೆ ಕಾರ್ಯನಿರ್ವಹಿಸಿದ್ದರು.


