ಮಂಗಳೂರು ವಿವಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ

Date:


ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು, ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ದೇಶದಲ್ಲಿ ಸಾಮಾಜಿಕ,‌ ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಅನೇಕ ರೀತಿಯ ಬದಲಾವಣೆಗಳಾಗಿವೆ. ಯಾವುದೇ ಸಮಾಜ, ಸಂಸ್ಥೆಯೊಳಗೆ ಗಡಿರೇಖೆಗಳು ಅಪಾಯಕಾರಿ, ಜಾತಿ ಧರ್ಮಗಳ ಮೂಲಕ ಕಂದಕ ಸೃಷ್ಡಿಯಾಗಬಾರದು. ನಾವು ಸ್ವತಃ ಆತ್ಮಾವಲೋಕನ ಮಾಡುವುದರೊಂದಿಗೆ ಸೌಹಾರ್ದತೆಯ ಸಮಾಜ ನಿರ್ಮಿಸಬೇಕಿದೆ ಎಂದರು.
ಕುಲಸಚಿವ ಕೆ‌.ರಾಜು ಮೊಗವೀರ ಅವರು ಮಾತನಾಡಿ, ಸ್ವಾತಂತ್ರ್ಯದ ಶುಭದಿನದಲ್ಲಿ ತ್ಯಾಗ ಬಲಿದಾನದ ಮಾಡಿದ ಮಹಾತ್ಮರನ್ನು ನೆನಪಿಸಿಕೊಳ್ಳುತ್ತಾ ಶಾಂತಿ,‌‌ ಸಮಾನತೆ,‌ ಸಹಬಾಳ್ವತೆಯೊಂದಿಗೆ ಬಾಳುವುದರೊಂದಿಗೆ ದೇಶ ಕಟ್ಟುವ ಕೆಲಸ ಮಾಡೋಣ‌ ಎಂದರು.

ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ , ದೈಹಿಕ ಶಿಕ್ಷಣ‌ ವಿಭಾಗದ ಅಧ್ಯಕ್ಷರಾದ ಡಾ.ಸಂತೋಷ್ ಜೆರಾಲ್ಡ್ ಡಿಸೋಜ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಪ್ರೊ.ಪ್ರಶಾಂತ್ ನಾಯ್ಕ್ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷ‌ಣ ವಿಭಾಗದ ಡಾ.ಪ್ರಸನ್ನ ಅವರು ಕಾರ್ಯಕ್ರಮ ನಿರೂಪಿಸಿದರು. ಸಹ ಪ್ರಾಧ್ಯಾಪಕ ಡಾ.ವಿಶ್ವನಾಥ್ ಅವರು ವಂದಿಸಿದರು. ಮಹೇಂದ್ರ ಹಾಗೂ ಬಳಗದವರು ದೇಶಭಕ್ತಿ ಗೀತೆಗಳನ್ನು ಹಾಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ ಅವರಿಗೆ ಬಿಳ್ಕೊಡುಗೆ

ಬಂಟ್ವಾಳ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ವತಿಯಿಂದ ಆರೋಗ್ಯ ಸುರಕ್ಷಾಧಿಕಾರಿ ಹರಿಣಾಕ್ಷಿ...

ಸೆ. 14 ರಂದು ಸುರಿಬೈಲ್ ಮದರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್

ಕಲ್ಲಡ್ಕ: ಬದ್ರಿಯಾ ಜುಮ್ಮಾ ಮಸೀದಿ ಸುರಿಬೈಲ್ ಇದರ ಅಧೀನದಲ್ಲಿರುವ ನುಸ್ರತುಲ್ ಉಲೂಂ...