ಉಳ್ಳಾಲದಲ್ಲಿ ಮುಹಿಯಿದ್ದೀನ್ ಬಾವ , ತಾಜುಲ್ ಉಲಮಾ(ಖ.ಸಿ.) ರವರ ಆಂಡ್ ನೇರ್ಚೆ

Date:

ಉಳ್ಳಾಲ : ಪ್ರವಾದಿ ಮುಹಮ್ಮದ್ ಪೈಗಂಬರ್ (ಸ )ರವರು ವಿದ್ಯಾಭ್ಯಾಸಕ್ಕೆ ‌ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಉತ್ತಮ ಬೆಳಕು ನೀಡಿದ ವ್ಯಕ್ತಿ ಆಗಿದ್ದರು. ಸಮಾಜದ ಅಭಿವೃದ್ಧಿಗಾಗಿ ಅವರು ನೀಡಿದ ಸೇವೆಯನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಬರಬೇಕು ಎಂದು ಹುಸೈನ್ ಸಅದಿ ಕೆಸಿರೋಡ್ ಕರೆ ನೀಡಿದರು.

ಅವರು ಉಳ್ಳಾಲ ಜುಮಾ ಮಸೀದಿ ಹಾಗೂ ಸಯ್ಯಿದ್ ಮದನಿ ದರ್ಗಾ ಇದರ ಆಶ್ರಯದಲ್ಲಿ ಮುಹಿಯಿದ್ದೀನ್ ಬಾವ ಮತ್ತು ತಾಜುಲ್ ಉಲಮಾ(ಖ.ಸಿ.) ರವರ ಹೆಸರಿನಲ್ಲಿ ದರ್ಗಾ ಸಭಾಂಗಣದಲ್ಲಿ ಸೋಮವಾರ ನಡೆದ ಆಂಡ್ ನೇರ್ಚೆ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು ನಮಗೆ ಧಾರ್ಮಿಕ ಶಿಕ್ಷಣ ಜೊತೆ ಲೌಕಿಕ ಶಿಕ್ಷಣ ಬೇಕು. ಇಸ್ಲಾಮಿನ ಚೌಕಟ್ಟು ‌ಮೀರದ ರೀತಿಯಲ್ಲಿ ನಮ್ಮ ಕಾರ್ಯ ಚಟುವಟಿಕೆಗಳು ಇರಬೇಕು ಎಂದರು.

ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್ ಊದ್ ತಂಙಳ್ ದುಆ ಆಶೀರ್ವಚನ ನೀಡಿದರು.ಬಾದ್ ಶಾ ಸಖಾಫಿ ಕೊಲ್ಲಂ ಮಾತನಾಡಿದರು.ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.ಈ ಕಾರ್ಯಕ್ರಮ ದಲ್ಲಿ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿ ಸ್ಟಾರ್, ವಕ್ಫ್ ಅಧಿಕಾರಿ ಅಬೂಬಕರ್ ಮೋಂಟುಗೋಳಿ, ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಪಿಲ್ ಮಜೀದ್ ಫಾಳಿಲಿ,ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಮಾಜಿ ಅಧ್ಯಕ್ಷ ಹಾಜಿ ಯು.ಎಸ್. ಹಂಝ, ಕಾರ್ಯದರ್ಶಿ ಮುಸ್ತಫಾ ಮದನಿ ನಗರ,ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಶ್ರಫ್ ಹಾಜಿ, ಹಮೀದ್ ಕಲ್ಲಾಪು, ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ,ನಜೀಮ್ ನೂರಾನಿ , ಅಬ್ದುಲ್ ಸಲಾಂ ಸಖಾಫಿ ,ನುಹ್ಮಾನ್ ನೂರಾನಿ, ತಸ್ಲೀಮ್ ನೂರಾನಿ, ಬಶೀರ್ ಸಖಾಫಿ,ಹಾಫಿಲ್ ಜಮಾಲ್ ಮದನಿ ನೂರಾನಿ , ಹಾಫಿಲ್ ಸಿನಾನ್ ಮದನಿ ,ಅಬ್ದುಲ್ ರಝಾಕ್ ಲತೀಫಿ, ಫಾರೂಕ್ ಮುಸ್ಲಿಯಾರ್, ಅಸದ್ ಮುಸ್ಲಿಯಾರ್,ಅಲ್ತಾಫ್ ಮತ್ತಿತರರು ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...