ಡಾ. ಹಾಜಿ ಯು‌.ಕೆ ಮೋನು ರವರನ್ನು ಸನ್ಮಾನಿಸಿದ ಯುವ ನ್ಯಾಯವಾದಿ ಅಸ್ಗರ್ ಮುಡಿಪು

Date:

ಕನಸುಗಳನ್ನು ನನಸು ಮಾಡುವ ಛಲಗಾರ ಡಾ. ಹಾಜಿ ಯು ಕೆ ಮೋನು ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು
ಉದ್ಯಮ ಕ್ಷೇತ್ರದಲ್ಲಿ ಅತ್ಯಂತ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಹಾಜಿ ಡಾ. ಮೋನು ಅವರು ಸಾವಿರಾರು ಮಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಸಮಾಜಮುಖಿ ಉದ್ಯಮಿಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಜಾತಿ-ಮತ ಭೇದವಿಲ್ಲದೆ ಬಡವರು, ನಿರ್ಗತಿಕರು ಹಾಗೂ ಅಗತ್ಯವಿರುವವರಿಗೆ ಮನೆ ನಿರ್ಮಾಣ, ಮದುವೆ ಸಹಾಯ ಸೇರಿದಂತೆ ಅನೇಕ ಸಮಾಜಸೇವಾ ಕಾರ್ಯಗಳ ಮೂಲಕ ಮಾನವೀಯತೆಯ ಮಾದರಿಯಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿಯೂ ಅವರು ಇತಿಹಾಸ ನಿರ್ಮಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೇ ಎಲ್‌ಕೆಜಿ ನಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಕೋರ್ಸ್‌ಗಳನ್ನು ಆರಂಭಿಸಿ, ಇಂದು ಸುಮಾರು 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಕನಚೂರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ಕಟ್ಟಿಬೆಳೆಸಿದ್ದಾರೆ. ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಆಸ್ಪತ್ರೆಯನ್ನೂ ನಿರ್ಮಿಸಿ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.
ಸಾಮಾನ್ಯ ವ್ಯಕ್ತಿಯೂ ದೃಢ ಸಂಕಲ್ಪ, ಪರಿಶ್ರಮ ಮತ್ತು ಸೇವಾ ಮನೋಭಾವದಿಂದ ಅಸಾಧ್ಯವೆನಿಸುವ ಸಾಧನೆಗಳನ್ನು ಮಾಡಬಹುದು ಎಂಬುದನ್ನು ತಮ್ಮ ಬದುಕಿನ ಮೂಲಕ ಸಾಬೀತುಪಡಿಸಿರುವ ಛಲಗಾರರು ಕನಚೂರು ಹಾಜಿ ಡಾ. ಯು ಕೆ ಮೋನು.
ಅವರ ಜನ್ಮದಿನದ ಈ ಶುಭ ಸಂದರ್ಭದಲ್ಲಿ, ಸರ್ವಶಕ್ತನಾದ ಅಲ್ಲಾಹನು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ನೆಮ್ಮದಿ ಹಾಗೂ ಇನ್ನಷ್ಟು ಸಮಾಜಸೇವೆ ಮಾಡುವ ಶಕ್ತಿ ಮತ್ತು ಯಶಸ್ಸನ್ನು ಕರುಣಿಸಲಿ. ಅವರ ಎಲ್ಲ ಸತ್ಕಾರ್ಯಗಳು ಹಾಗೂ ಕನಸುಗಳು ನನಸಾಗಲಿ ಎಂದು ಹೃತ್ಪೂರ್ವಕವಾಗಿ ಪ್ರಾರ್ಥಿಸುತ್ತೇನೆ.
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

– ಮಹಮ್ಮದ್ ಅಸ್ಗರ್, ವಕೀಲರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...