ನೃತ್ಯ ಮತ್ತು ಸಂಗೀತ ಮನಸ್ಸನ್ನು ಅರಳಿಸುತ್ತದೆ: ಜೈನಮಠದ ಪಂಡಿತಾಚಾರ್ಯವರ್ಯ ಸ್ವಾಮೀಜಿ

Date:

ಮಂಗಳೂರು: ದೇಶೀಯ ನೃತ್ಯ ಮತ್ತು ಸಂಗೀತವು ಅಬ್ಬರವಿಲ್ಲದೆಯೇ ಮನಸ್ಸನ್ನು ಅರಳಿಸುವ ಕೆಲಸ ಮಾಡುತ್ತದೆ. ಜೀವನೋತ್ಸಾಹ ಹೆಚ್ಚಿಸಲು ಸಂಗೀತವು ಪೂರಕವಾಗಿದೆ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.

ಅವರು ಮೂಡುಬಿದಿರೆ ಸ್ಕೈ ಪೈಂಟ್ಸ್ ಸಂಸ್ಥೆಯ ವತಿಯಿಂದ ಕನ್ನಡ ಭವನದಲ್ಲಿ ಭಾನುವಾರ ಸಂಜೆ ನಡೆದ ವಿಶೇಷ ‘ಕರ್ನಾಟಕ ಶಾಸ್ತ್ರೀಯ ತ್ರಿವಳಿ ವಯಲಿನ್ ಸಂಗೀತ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು

ಆಧ್ಯಾತ್ಮ ಹಾಗೂ ದೈವಿಕ ಅಂಶವುಳ್ಳ ಶಾಸ್ತ್ರೀಯ ಸಂಗೀತಕ್ಕೆ ಜರ್ಜರಿತವಾಗಿರುವ ಮನಸ್ಸನ್ನು ಶಾಂತಗೊಳಿಸುವ ಗುಣವಿದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಲಾವಿದರ ನಿರಂತರ ಸಾಧನೆಗೆ ಪೂರಕವಾಗಿ ಅವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸಂಗೀತ ನೋಡುವುದಕ್ಕಿಂತ, ನೇರವಾಗಿ ಕಲಾವಿದರ ಎದುರು ಕುಳಿತು ಆಸ್ವಾದಿಸುವುದು ವಿಶೇಷ ಅನುಭವ ನೀಡುತ್ತದೆ. ಇದು ಕಲಾವಿದರಿಗೂ ಹೊಸ ಹುಮ್ಮಸ್ಸು ತುಂಬುತ್ತದೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ನಾಗೇಂದ್ರ, ಕಾರ್ಯಕ್ರಮ ಸಂಘಟಕ ಎಂ. ಶೈಲೇಂದ್ರ ಕುಮಾರ್ ಆರೋಹ ಉಪಸ್ಥಿತರಿದ್ದರು. ಡಾ. ಪ್ರಭಾತ್ ಬಲ್ನಾಡು ಕಾರ್ಯಕ್ರಮ ನಿರೂಪಿಸಿದರು.

ತಿರುವನಂತಪುರದ ಸಹೋದರ-ಸಹೋದರಿ ಜೋಡಿಯಾದ ಮಹಾದೇವ ಶರ್ಮ ಮತ್ತು ರಾಜಶ್ರೀ ಅವರೊಂದಿಗೆ ಯುವ ಪ್ರತಿಭೆ ವೈದ್ಯನಾಥ ಶರ್ಮ ಅವರು ತ್ರಿವಳಿ ವಯಲಿನ್ ಕಚೇರಿ ನಡೆಸಿಕೊಟ್ಟರು. ಮೃದಂಗದಲ್ಲಿ ಡಾ. ಎ. ಜಯಕೃಷ್ಣನ್ ಹಾಗೂ ಘಟಂನಲ್ಲಿ ವೆಲ್ಲಂತಂಜೂರು ಶ್ರೀಜಿತ್ ಸಹಕರಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...