ಎಕ್ಸಲೆಂಟ್‌ನಿಂದ ಸ್ವಚ್ಛ ಗ್ರಾಮ ಸಂಕಲ್ಪ

Date:

ಮೂಡುಬಿದಿರೆ: ಪುರಸಭೆಯ ಸಹಯೋಗದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಸ್ವಚ್ಛ ಗ್ರಾಮ ಸಂಕಲ್ಪ ಕೈಗೊಂಡಿದ್ದು ವಿದ್ಯಾರ್ಥಿಗಳಲ್ಲಿ ನಿರಂತರ ಸ್ವಚ್ಛತಾ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾಲೇಜಿನ ಎನ್‌ಎಸ್‌ಎಸ್, ಎನ್‌ಸಿಸಿ, ರೇಂಜರ್ಸ್, ರೋವರ್‍ಸ್, ರೆಡ್‌ಕ್ರಾಸ್, ಸ್ಕೌಟ್ಸ್‌ಗೈಡ್ಸ್ ಸ್ವಯಂಸೇವಕರು ಬುಧವಾರ ಕೀರ್ತಿನಗರ ಸರ್ಕಲ್‌ನಿಂದ ಗಂಟಾಲ್‌ಕಟ್ಟೆಯವರೆಗೆ ಶ್ರಮದಾನದ ಮೂಲಕ ಸ್ವಚ್ಛತೆ ನಡೆಸಿದರು.

ಬಳಿಕ ಕಾಲೇಜಿನಲ್ಲಿ ನಡೆದ ಸ್ವಚ್ಛ ಗ್ರಾಮ ಸಂಕಲ್ಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗಂಟಾಲ್‌ಕಟ್ಟೆ ಚರ್ಚ್‌ನ ಧರ್ಮಗುರು ರೇ| ಫಾ. ರೊನಾಲ್ಡ್ ಪ್ರಕಾಶ್ ಡಿಸೋಜ ಮಾತನಾಡಿ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಮ್ಮ ಮನಸ್ಸು ಸ್ವಚ್ಛವಾಗಿರಬೇಕು. ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಸ್ವಚ್ಛತೆಯ ಪಾತ್ರ ಮಹತ್ವದ್ದಾಗಿದೆ ಎಂದರು.

ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ., ಪರಿಸರ ಇಂಜಿನಿಯರ್ ಶಿಲ್ಪಾ ಸ್ವಚ್ಛತೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...

ಬ್ರೇಕಿಂಗ್ ನ್ಯೂಸ್: ಬೆಳ್ತಂಗಡಿ ಪತಿ ಹತ್ಯೆ ಪ್ರಕರಣ – ಕೊಲೆ ಸಾಬೀತಾದರೂ ಪತ್ನಿಗೆ ಶಿಕ್ಷೆ ಇಲ್ಲ: ಕೋರ್ಟ್ ತೀರ್ಪು

ಕೋರ್ಟ್ ತೀರ್ಪಿನ ಪೂರ್ಣ ವಿವರ ಇಲ್ಲಿದೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು...

ಬಾಂಗ್ಲಾ ಪ್ರಜೆಗೆ ಪಾಸ್‌ಪೋರ್ಟ್ ಮಾಡಲು ಸಹಾಯ: ವಿಟ್ಲ ಪೊಲೀಸ್ ಕಾನ್ಸ್ಟೇಬಲ್ ಬಂಧನ

ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿಸಿದ ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ...

ಸಂಪಿಗೆ ಚಚ್೯ನಲ್ಲಿ ಕ್ರಿಸ್ಮಸ್-2025

ಕ್ರಿಸ್ಮಸ್ ನ ಆದಶ೯ ಮತ್ತು ತತ್ವಗಳನ್ನು ಮೈಗೂಡಿಸಿಕೊಳ್ಳಿ ಮೂಡುಬಿದಿರೆ: ಮಂಗಳೂರು ಧಮ೯ಪ್ರಾಂತ್ಯ ಮೂಡುಬಿದಿರೆ...