ನರಿಂಗಾನ ಗ್ರಾಮ ಪಂಚಾಯಿತಿ ಯಲ್ಲಿ ಆಟಿಡೊಂಜಿ‌ ದಿನ

Date:

vltvkannada.com ಉಳ್ಳಾಲ:ರಸ್ತೆ, ಚರಂಡಿ, ಬೀದಿದೀಪ, ಕುಡಿಯುವ ನೀರು ಸರಬರಾಜು ಮಾತ್ರ ಅಭಿವೃದ್ಧಿಯಲ್ಲ, ಅದಕ್ಕೂ ಮೀರಿದ ಯೋಚನೆಗಳಿದ್ದು ಪ್ರತಿಯೊಂದು ಮನೆಯಲ್ಲಿ ನೆಮ್ಮದಿ ಇರುವುದೇ ಅಭಿವೃದ್ಧಿಯಾಗಿದ್ದು ನರಿಂಗಾನದಲ್ಲಿ ಅದು ಆಗಿದೆ ಎಂದು ಹೇಳಬಹ ಅಂತಹ ಅಭಿವೃದ್ಧಿ ಎಂದು ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಗುರುದತ್ ಎಂ.ಎನ್. ಶ್ಲಾಘಿಸಿದರು.


ನರಿಂಗಾನ ಗ್ರಾಮ ಪಂಚಾಯಿತಿ, ಸ್ವಚ್ಛ ಗ್ರಾಮ ಅಭಿಯಾನ, ಅಪ್ನಾದೇಶ್ ಮಾದರಿ ಗ್ರಾಮ ಅಭಿಯಾನ ಪ್ರಯುಕ್ತ ನರಿಂಗಾನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಸ್ವಚ್ಛ ಮನೆ, ಸ್ವಾಭಿಮಾನ ಕುಟುಂಬ’ ಸ್ವಯಂ ಘೋಷಣಾ ಪತ್ರ-ಪುಸ್ತಕ ಬಿಡುಗಡೆ ಹಾಗೂ ಆಟಿಡೊಂಜಿ‌ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ನರಿಂಗಾನ ಕಂಬಳೋತ್ಸವ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ, ಹಳ್ಳಿಗಳಲ್ಲಿದ್ದ ಹಿಂದಿನ ಸಂಪ್ರದಾಯ ಪ್ರಸ್ತುತ ದಿನಗಳಲ್ಲಿ ನಗರಕ್ಕೆ ತಲುಪಿ ಒಂದು ದಿನಕ್ಕೆ ಸೀಮಿತವಾಗಿರುವುದು ಖೇದಕರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ವಿಚಾರದಲ್ಲಿ ಮಾತನಾಡುವಾಗ ಸ್ಥಳೀಯ ಭಾಷೆಯಲ್ಲಿ ಮಾತನಾಡಿದಾಗ ಜನರಿಗೆ ಅರ್ಥವೂ ಆಗುತ್ತದೆ, ಇಲ್ಲಿನ ಸಂಸ್ಕೃತಿ ಬಿಂಬಿಸಲೂ ಸಾಧ್ಯವಾಗುತ್ತದೆ ಎಂದರು.
ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜನಪದ ವಿದ್ವಾಂಸ ಚಂದ್ರಹಾಸ ಕಣಂತೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ನರಿಂಗಾನ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೈಲಜಾ ಶೆಟ್ಟಿ, ಉಪಾಧ್ಯಕ್ಷೆ ಜ್ಯೋತಿ ಡಿಸೋಜ, ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ, ಕಲ್ಲರಕೋಡಿ ಸರ್ಕಾರಿ ಶಾಲಾ ಮುಖ್ಯಶಿಕ್ಷಕಿ ನಯನ ಕುಮಾರಿ ಕೆ., ಅಂಗನವಾಡಿ ಸುಪರ್ ವೈಸರ್ ಮುಬೀನಾ, ತಾ.ಪಂ. ಸಂಯೋಜಕಿ ನಿಶ್ಮಿತಾ ಹಾಗೂ
ಪಂಚಾಯಿತಿ ಕಾರ್ಯದರ್ಶಿ ನಳಿನಿ ಎ.ಕೆ.
ಮೊದಲಾದವರು ಉಪಸ್ಥಿತರಿದ್ದರು.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಜನಿ ಡಿ. ಸ್ವಾಗತಿಸಿದರು. ಅಬ್ದುಲ್ ರಹಿಮಾನ್ ಚಂದ ಹಿತ್ಲು ವಂದಿಸಿದರು. ಪತ್ರಕರ್ತ ಸತೀಶ್ ಕುಮಾರ್ ಪುಂಡಿಕಾಯಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...