ತೌಡುಗೋಳಿ: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಓವರ್ ಹೆಡ್ ಟ್ಯಾಂಕ್ ಗೆ ಶಂಕು ಸ್ಥಾಪನೆ

Date:

ಸ್ಪೀಕರ್ ಯು. ಟಿ. ಖಾದರ್ ಅವರ ಕನಸಿನ ಯೋಜನೆಯಾ ಗಿರುವ ಮಂಗಳೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ದಿನದ 24ಗಂಟೆ ಕುಡಿಯುವ ನೀರು ಸರಬರಾಜಿಗೆ ಮನೆ ಮನೆಗೆ ನಲ್ಲಿ ಸಂಪರ್ಕ ಈಗಾಗಲೇ ಆಗಿದ್ದು ಈ ಕಾಮಗಾರಿಯಿಂದ ಜನರಿಗೆ ಬಹು ದೊಡ್ಡ ಉಪಯೋಗವಾಗಲಿದೆ ಎಂದು ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ನವಾಜ್ ನರಿಂಗಾನ ಹೇಳಿದರು.


ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ನರಿಂಗಾನ ಗ್ರಾಮದಲ್ಲಿ ನಿರ್ಮಾಣ ಆಗಲಿರುವ ಓವರ್ ಹೆಡ್ ಟ್ಯಾಂಕ್ ಗೆ ತೌಡುಗೋಳಿಯ ಯುವಕ ಮಂಡಲದ ವಠಾರದಲ್ಲಿ ಶನಿವಾರ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಈಗಾಗಲೇ ಬಹಳಷ್ಟು ಕಾಮಗಾರಿ ನಡೆದಿದೆ. ಹಾಗೆಯೇ ಗ್ರಾಮದ ಎತ್ತರದ ಪ್ರದೇಶದಲ್ಲಿ ಬೃಹತ್ ಟ್ಯಾಂಕ್ ನಿರ್ಮಾಣ ಆಗಲಿದೆ ಎಂದರು.
ನರಿಂಗಾನ ಗ್ರಾಮ ಪಂಚಾಯಿತಿ ಹಿರಿಯ ಸದಸ್ಯ ಶೇಖಬ್ಬ ನಿಡ್ಮಾಡ್, ಸದಸ್ಯರಾದ ಮುರಲೀಧರ ಶೆಟ್ಟಿ ಮೋರ್ಲ , ಸುಂದರ ಪೂಜಾರಿ ಕೋಡಿ ಮಜಲು, ಯುವಕ ಮಂಡಲದ ಮಾಜಿ ಗೌರವಾಧ್ಯಕ್ಷ ಉದಯ ಶಂಕರ್ ಶೆಟ್ಟಿ ಬಲೆತ್ತೋಡು, ಸ್ಥಳೀಯರಾದ ಬಾವುಚ್ಚ, ಫಾರೂಕ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...