ಪಡುಮಾರ್ನಾಡು: ಸುಮುಖ ಮಂದಿರ, ಸಭಾಭವನಕ್ಕೆ ಧರ್ಮಸ್ಥಳ ಯೋಜನೆಯಿಂದ ದೇಣಿಗೆ

Date:


ಮೂಡುಬಿದಿರೆ: ಪಡುಮಾರ್ನಾಡು ಅಚ್ಚರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುಮುಖ ಮಂದಿರ ಹಾಗೂ ಸಭಾಭವನದ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 1 ಲಕ್ಷ ರೂ. ದೇಣಿಗೆಯನ್ನು ಉಷಾ ಡಿ.ಪೈ-ದಯಾನಂದ ಪೈ ವೇದಿಕೆಯಲ್ಲಿ ಶುಕ್ರವಾರ ಹಸ್ತಾತರಿಸಲಾಯಿತು.


ತಾಲೂಕು ಯೋಜನಾಧಿಕಾರಿ ಧನಂಜಯ್ ದೇಣಿಗೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಂ.ದಯಾನಂದ ಪೈ ಅವರಿಗೆ ಹಸ್ತಾಂತರಿಸಿದರು. ದೇಣಿಗೆ ಸ್ವೀಕರಿಸಿ ಮಾತನಾಡಿ ದಯಾನಂದ ಪೈ, ಗಣೇಶೋತ್ಸವ ಸಮಿತಿ ಮಾತ್ರವಲ್ಲದೆ ಊರಿನ ಧಾರ್ಮಿಕ, ಶೈಕ್ಷಣಿಕ ಕೇಂದ್ರಗಳಿಗೆ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಯೋಜನೆಯ ಮುಖೇನ ದೇಣಿಗೆ, ಸವಲತ್ತುಗಳು ಲಭಿಸಿವೆ. ಸಮಿತಿಯಿಂದ ಈಗಾಗಲೇ ಸುಸಜ್ಜಿತವಾದ ಸಭಾಭವನ ಹಾಗೂ ಮಂದಿರ ನಿರ್ಮಾಣಗೊಂಡಿದೆ. ಮುಂದೆ ಭೋಜನಾಲಯ, ಅಡುಗೆ ಕೋಣೆಯ ಯೋಜನೆಯನ್ನು ರೂಪಿಸಿದ್ದೇವೆ ಎಂದರು.


ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸುಭಾಶ್ಚಂದ್ರ ಚೌಟ, ಬೆಳುವಾಯಿ ವಲಯಾಧ್ಯಕ್ಷ ಜಗತ್ಪಾಲ್ ಎಸ್.ಹೆಗ್ಡೆ, ಯೋಜನೆಯ ಮೇಲ್ವಿಚಾರಕಿ ಯಶೋಧ, ಒಕ್ಕೂಟದ ಅಧ್ಯಕ್ಷ ಶ್ಯಾಮ್ ಹೆಗ್ಡೆ, ಸೇವಾ ಪ್ರತಿನಿಧಿ ಉಷಾಕಿರಣ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಉದಯ ಪೂಜಾರಿ, ಸಂಚಾಲಯ ದಯಾನಂದ ಭಟ್, ಕೋಶಾಧಿಕಾರಿ ಜಯರಾಂ, ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...