ಡಿ 28ರಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು–ಸಾಲೆತ್ತೂರು ಇದರ ವತಿಯಿಂದ ಅಂಬುಲೆನ್ಸ್ ಸೇವೆ ಲೋಕಾರ್ಪಣೆ

Date:

ವಿಟ್ಲ: ಸಾಮಾಜಿಕ ಸೇವೆ ಮತ್ತು ಮಾನವೀಯತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು – ಸಾಲೆತ್ತೂರು ಇದರ ವತಿಯಿಂದ ಸಾರ್ವಜನಿಕ ಸೇವೆಗೆ ಸಮರ್ಪಿತ ಆಂಬುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಇದೇ ಡಿಸೆಂಬರ್ 28ರ ಆದಿತ್ಯವಾರದಂದು ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆಯಲಿದೆ.

ಈ ಆಂಬುಲೆನ್ಸ್ ಸೇವೆ ತುರ್ತು ಅಪಘಾತ ಪರಿಸ್ಥಿತಿಯಲ್ಲಿ ಗ್ರಾಮಸ್ಥರು, ಸುತ್ತಮುತ್ತಲಿನ ಪ್ರದೇಶದ ಜನತೆ, ಅಗತ್ಯವಿರುವ ರೋಗಿಗಳು ಹಾಗೂ ಸಾಮಾಜಿಕ ಕಾರ್ಯಗಳಿಗೆ ಯಾವ ಸಮಯದಲ್ಲಾದರೂ ಲಭ್ಯವಾಗುವಂತೆ ಟ್ರಸ್ಟ್ ವತಿಯಿಂದ ವ್ಯವಸ್ಥೆ ಮಾಡಲಾಗಿದೆ.

ಜನತಾ ಸೇವೆಯನ್ನು ಕಣ್ಮಣಿಯಾಗಿ ಕಾಣುವ ಉದ್ದೇಶದಿಂದ ಈ ಯೋಜನೆ ರೂಪುಗೊಂಡಿದ್ದು, ಇದರಿಂದ ಸಾಮಾನ್ಯ ಜನರಿಗೆ ವೇಗವಾದ ಮತ್ತು ಭದ್ರ ವೈದ್ಯಕೀಯ ತುರ್ತು ಬೆಂಬಲ ದೊರೆಯುವ ನಿರೀಕ್ಷೆ ಇದೆ.

ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಖಾದರ್ ಸಾಲೆತ್ತೂರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...