ಪವರ್ ಫ್ರೆಂಡ್ಸ್, ಶಾಮಿಯಾನ ಮಾಲಕರ ಸಂಘದಿಂದ ಅಂಚೆ ಜನ ಸಂಪಕ೯ ಅಭಿಯಾನ

Date:

651ಮಂದಿ ಆಧಾರ್ ನೋಂದಣಿ, 245 ಮಂದಿ ಆರೋಗ್ಯ ವಿಮೆ ನೋಂದಣಿ

ಮೂಡುಬಿದಿರೆ : ಪವರ್ ಫ್ರೆಂಡ್ಸ್ ಬೆದ್ರ, ದ ಕ ಜಿಲ್ಲಾ ಶಾಮಿಯಾನ ಮಾಲಕರ ಸಂಘ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಭಾನುವಾರ ಕನ್ನಡ ಭವನದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ, ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮಾ ಶಿಬಿರ ನಡೆಯಿತು.

ಉದ್ಯಮಿ ಶ್ರೀಪತಿ ಭಟ್ ದೀಪ ಬೆಳಗಿ ಉದ್ಘಾಟಿಸಿ ಶುಭ ಹಾರೈಸಿದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕೇಂದ್ರ ಸರ್ಕಾರದ ಮುತುವರ್ಜಿಯಿಂದ ಅಂಚೆ ಕಛೇರಿಗಳು ಹಿಂದಿನಂತೆಯೇ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಆರೋಗ್ಯ ಇನ್ನಿತರ ಎಲ್ಲಾ ಸೌಲಭ್ಯಗಳು ಅಂಚೆ ಇಲಾಖೆಯ ಮೂಲಕ ಬಡವರ್ಗವನ್ನು ತಲುಪುತ್ತಿದೆ ಎಂದರು.

ಶಾಮಿಯಾನ ಸಂಘದ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ, ಪವರ್ ಫ್ರೆಂಡ್ಸ್ ಅಧ್ಯಕ್ಷ ವಿನಯ್ ಕುಮಾರ್, ವಕೀಲ ಶರತ್ ಶೆಟ್ಟಿ, ಉದ್ಯಮಿ ಅಬುಲಾಲ್ ಪುತ್ತಿಗೆ, ಪುತ್ತೂರು ಅಂಚೆ ಇಲಾಖೆಯ ಮಾರುಕಟ್ಟೆ ವ್ಯವಸ್ಥಾಪಕ ಗುರುಪ್ರಸಾದ್,ಸಿಸ್ಟಮ್ ಅಡ್ಮಿನ್ ನೂತನ್ ಬಂಗೇರ ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಸುಮಾರು 651 ಮಂದಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯ ಸದುಪಯೋಗವನ್ನು ಪಡೆದುಕೊಂಡರು. ಸುಮಾರು 245 ಮಂದಿ ಅಪಘಾತ ಮತ್ತು ಆರೋಗ್ಯ ವಿಮೆಯ ನೋಂದಣಿ ಮಾಡಿಸಿಕೊಂಡರು. 39 ಮಂದಿ ಅಂಚೆ ಇಲಾಖೆಯ ಸಣ್ಣ ಉಳಿತಾಯ ಖಾತೆಗಳು, 3 ಅಂಚೆ ಜೀವ ವಿಮೆ ( 28,00,000 S/A ಹಾಗೂ 39,225/- ಪ್ರೀಮಿಯಂ) ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಟ್ಲ: ಕರೈಯಲ್ಲಿ ಗೋವು ಸಾಗಾಟ ತಡೆದು, ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ವಿಟ್ಲ (ಫೆ. 27): ಗುರುವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ...

ಸೌದಿ ಅರೇಬಿಯಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಉಮ್ರಾ ಬಸ್ ಅಪಘಾತ; ಮೂವರು ಭಾರತೀಯರ ಮೃತ್ಯು; ಹಲವರಿಗೆ ಗಾಯ

ಜೆದ್ದಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ...

ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.27ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ...

ಆಧುನಿಕ ಶಿಕ್ಷಣದೊಂದಿಗೆ ದೇಶಕ್ಕೆ ಕೊಡುಗೆಯಾಗಬಲ್ಲ ಆವಿಷ್ಕಗಳನ್ನು ಮಾಡಿ: ಕಾಳಹಸ್ತೇಂದ್ರ ಸ್ವಾಮೀಜಿ

ಮೂಡುಬಿದಿರೆ: ವಿಶ್ವಕಮ೯ರು ಸಮಾಜದವರು ಸಾಂಪ್ರದಾಯಿಕವಾಗಿ ತಾಂತ್ರಿಕ ಕೌಶಲವನ್ನು ಸಹಜವಾಗಿ ಮೈಗೂಡಿಸಿಕೊಂಡಿದ್ದು ಮುಂದೆ...