ಉಳ್ಳಾಲ ಕ್ಲಸ್ಟರ್ ನಲ್ಲಿ ಪ್ರತಿಭಾ ಕಾರಂಜಿ 2025

Date:

ಉಳ್ಳಾಲ:ವಿದ್ಯಾರ್ಥಿಗಳು ಪಾಠದೊಂದಿಗೆ ತಮ್ಮ ಪ್ರತಿಭೆಯನ್ನು ಬೆಳಗಿಸುವಂಥ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಸಕ್ರಿಯವಾಗಿ ತಮ್ಮ ಮುಂದಿನ ಜೀವನವನ್ನ ಕಟ್ಟಿ ಬೆಳೆಸಿಕೊಳ್ಳಲಿಕ್ಕಾಗುತ್ತದೆ ಎಂದು ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಈಶ್ವರರವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ಗುಚ್ಛ ಸಂಪನ್ಮೂಲ ಕೇಂದ್ರ ಉಳ್ಳಾಲ ಅನುದಾನಿತ ಬಿಎಂ ಹಿರಿಯ ಪ್ರಾಥಮಿಕ ಶಾಲೆ ಯ ಸಹಯೋಗದಲ್ಲಿ ಉಳ್ಳಾಲದಲ್ಲಿ ಆಯೋಜಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡುತ್ತಾ ಶಿಕ್ಷಕರು ಇಂದಿನ ಒತ್ತಡದ ನಡುವೆಯೂ ವಿದ್ಯಾರ್ಥಿಗಳನ್ನು ಪಾಠ ಮತ್ತು ಪಾಠೇತರ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುವ ಪ್ರೇರಣೆಯನ್ನು ನೀಡುತ್ತಿರುವುದು ಶ್ಲಾಘನಿಯ ಎಂದರು.

ಬಿ ಎಂ ವಿದ್ಯಾ ಸಂಸ್ಥೆಯ ಸಂಚಾಲಕರಾದ ಎಸ್ ಎಸ್ ಸಾಲಿನ್ಸ್ ರವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಿ ಆರ್ ಪಿ ಗಳಾದ ತಹಸಿನ ಬೇಗಂ, ವಿಲ್ಮಾ, ಸಿಆರ್‌ಪಿಗಳಾದ ವಿಲ್ಮಾ, ಮಗಧೀರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪಾವನ, ಟಿಪ್ಪು ಸುಲ್ತಾನ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ಶೆಟ್ಟಿ, ಬಿ ಎಂ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯವಂತಿ ಮೊದಲಾದವರು ಉಪಸ್ಥಿತರಿದ್ದರು.

ಉಳ್ಳಾಲ ಮುಖ್ಯ ಸಂಪನ್ಮೂಲ ವ್ಯಕ್ತಿ ಶ್ರೀಯುತ ಮೋಹನ್ ಕುಮಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಳೆಕೋಟೆ ಸೈಯದ್ ಮದನಿ ವಿದ್ಯಾ ಸಂಸ್ಥೆಗಳ ಮುಖ್ಯ ಶಿಕ್ಷಕರಾದ ಶ್ರೀಯುತ ಕೆಎಂ ಕೆ ಮಂಜನಾಡಿ ಸ್ವಾಗತಿಸಿದರು. ಬಿಎಂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹಿಲ್ದಾ ಹೆರೋಜ ಅವರು ಧನ್ಯವಾದವಿತರು. ಟಿಪ್ಪು ಸುಲ್ತಾನ್ ಪ್ರೌಢಶಾಲೆಯ ಚಿತ್ರಕಲಾಧ್ಯಾಪಕ ರಫೀಕ್ ರವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...