ರಾಮ ಭಜನಾ ಮಂದಿರ (ರಿ) ಕೊಲ್ಯ ಅಮೃತ ಮಹೋತ್ಸವ ಸಂಭ್ರಮ ಡಿ.7 ರಿಂದ ಡಿ.14ರವರೆಗೆ

Date:

ಉಳ್ಳಾಲ: ಶ್ರೀ ರಾಮ ಭಜನಾ ಮಂದಿರ(ರಿ ) ಕೊಲ್ಯ ಇದರ 75ನೇ ವಾರ್ಷಿಕೋತ್ಸವದ ಅಂಗವಾಗಿ ಅಮೃತ ಮಹೋತ್ಸವ ಸಂಭ್ರಮ ಕಾರ್ಯಕ್ರಮವು ಡಿ.7 ರ ಭಾನುವಾರದಿಂದ ಡಿ 14 ರ ಭಾನುವಾರದ ವರೆಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಉಳ್ಳಾಲ್ ತಿಳಿಸಿದರು.

ಅವರು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಡಿ.7 ರ ಭಾನುವಾರದಂದು ಸಂಜೆ 4. 30 ಗಂಟೆಗೆ ಕೊಲ್ಯ ಶ್ರೀ ಮೂಕಾಂಜಕಾ ದೇವಸ್ಥಾನದಿಂದ ಶ್ರೀ ರಾಮ ಭಜನಾ ಮಂದಿರದವರೆಗೆ ಕುಣಿತ ಭಜನೆ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ಏಳು ದಿನಗಳ ಸಂಧ್ಯಾ ಭಜನೆ ಪ್ರಾರಂಭ (ಪ್ರತೀ ದಿನ ಸಂಜೆ 7:30ಕ್ಕೆ ಮಂಗಳಾಚರಣೆ)ನಡೆಯಲಿದೆ.

ಡಿ 12 ರ ಶುಕ್ರವಾರದಂದು ಸಂಜೆ 7.30 ಕ್ಕೆ ಸಂಧ್ಯಾ ಭಜನೆ ಮಂಗಳಾಚರಣೆಯ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಿವದೂತ ಗುಳಿಗೆ ಎಂಬ ತುಳುನಾಟಕ ನಡೆಯಲಿದೆ. ಡಿ. 13 ರ ಶನಿವಾರದಂದು ಬೆಳಿಗ್ಗೆ ಸೂರ್ಯೋದಯಕ್ಕೆ ಏಕಾಹ ಭಜನಾ ಸಂಕೀರ್ತನೆ ಆರಂಭಗೊಂಡು ಮಧ್ಯಾಹ್ನ 12. 30 ಗಂಟೆಯ ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಮರುದಿನ ಸೂರ್ಯೋದಯಕ್ಕೆ ಮಂಗಳಾಚರಣೆಗೊಳ್ಳಲಿದೆ ಎಂದರು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಗಟ್ಟಿ, ಶ್ರೀ ರಾಮ ಭಜನಾ ಮಂದಿರ ಅಧ್ಯಕ್ಷ ಪ್ರೀತಂ ಕುಮಾರ್ ಕೊಲ್ಯ, ಶ್ರೀ ರಾಮ್ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ವಿಶ್ವತ್ ಕುಲಾಲ್ ಕೊಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...