ಕಾಡುಮಠ ಸರ್ಕಾರಿ ಶಾಲೆಯ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ನೀಡುತ್ತಿರುವ ಸಾದಿಕ್ ಕರೈ

Date:

ವಿಟ್ಲ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವ ಈಗಿನ ಕಾಲದಲ್ಲಿ ಸಾಲೆತ್ತೂರು ತರಕಾರಿ ಅಂಗಡಿಯ ಮಾಲಕ ಸಾದಿಕ್ ಕರೈ ಅವರು ಕಾಡುಮಠ ಪ್ರಾಥಮಿಕ ಶಾಲೆಯ ಮದ್ಯಾಹ್ನದ ಬಿಸಿಯೂಟಕ್ಕೆ ಉಚಿತವಾಗಿ ತರಕಾರಿ ನೀಡುತ್ತಾ ನಿಜವಾದ ಶಿಕ್ಷಣ ಪ್ರೇಮಿ ಎಣಿಸಿದ್ದಾರೆ.

ಸಾಲೆತ್ತೂರು ಸಮೀಪದ ಕಾಡುಮಠ ಶಾಲೆಯ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಅಮೂಲ್ಯವಾದ ಸಹಕಾರ ನೀಡುತ್ತಿರುವ ಸಾಲೆತ್ತೂರು ತರಕಾರಿ ಅಂಗಡಿಯ ಮಾಲಕ ಶ್ರೀ ಸಾದೀಕ್‌ ಕರೈ ಅವರ ಈ ಸೇವೆಯನ್ನು ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪಂಚಾಯತ್ ಗುರುತಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕಿದೆ.

ಪ್ರತಿ ದಿನದ ಬಿಸಿಯೂಟಕ್ಕೆ ಅಗತ್ಯವಿರುವ ಎಲ್ಲಾ ತರಕಾರಿಗಳನ್ನು ಉಚಿತವಾಗಿ ನೀಡುವ ಮೂಲಕ, ಅವರು ತನ್ನ ಊರಿನ ಶಾಲೆಯ ವಿದ್ಯಾರ್ಥಿಗಳ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಅವರ ಈ ಸೇವಾಭಾವನೆ ಮತ್ತು ಮಾನವೀಯತೆ ನಿಜಕ್ಕೂ ಶ್ಲಾಘನೀಯವಾಗಿದೆ.

ತನ್ಮೂಲಕ ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಉತ್ತಮ ಆಹಾರ ಪಡೆಯುವುದರ ಜೊತೆಗೆ, ಸಮಾಜದಲ್ಲಿ ಪರೋಪಕಾರಿ ಮೌಲ್ಯಗಳನ್ನೂ ಕಲಿಯುತ್ತಿದ್ದಾರೆ. ಶಿಕ್ಷಣ ಕ್ಷೇತ್ರವನ್ನು ಉದ್ಯಮವಾಗಿಸುವವರ ನಡುವೆ ಸಾದೀಕ್ ಅವರಂತಹ ಪರೋಪಕಾರಿ ವ್ಯಕ್ತಿಗಳನ್ನು ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಾ ಇತರರಿಗೆ ಪ್ರೇರಣೆ ನೀಡಬೇಕಿದೆ ಎಂದು ಕಾಡುಮಠದ ಜನರು ಅಭಿಪ್ರಾಯಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...