ಡಿ.7 ರಂದು ಮೂಡಬಿದಿರೆಯಲ್ಲಿ ‘ಸಮಸ್ತ ಆದರ್ಶ ಮಹಾ ಸಮ್ಮೇಳನ’

Date:

ಮೂಡುಬಿದಿರೆ : ಸಮಸ್ತದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಯುಕ್ತ ಹಾಗೂ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ಕನ್ಯಾಕುಮಾರಿಯಿಂದ ಮಂಗಳೂರು ತನಕ ಹಮ್ಮಿಕೊಂಡಿರುವ ಶತಾಬ್ದಿ ಸಂದೇಶ ಯಾತ್ರೆಯ ಪ್ರಚಾರಾರ್ಥ ಸಮಸ್ತ ಆದರ್ಶ ಮಹಾ ಸಮ್ಮೇಳನವು ಡಿ.7 ರಂದು ಭಾನುವಾರ ಮಧ್ಯಾಹ್ನ ಎರಡು ಗಂಟೆಯಿಂದ ಮೂಡುಬಿದಿರೆಯ ಲಾಡಿಯಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ‌.ಎ.ಉಸ್ಮಾನ್ ಏರ್ ಇಂಡಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ‘ ಆ ದಿನ ಮಧ್ಯಾಹ್ನ 2 ಗಂಟೆಗೆ ಮೂಡುಬಿದಿರೆ ಡೌನ್ ಟೌನ್ ಮಸೀದಿಯಿಂದ ಲಾಡಿವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಲಿದ್ದು 3-30 ಗಂಟೆಗೆ ಸ್ವಾಗತ ಸಮಿತಿಯ ಗೌರವ ಸಲಹೆಗಾರರಾದ ಅಬ್ದುರ್ರಹ್ಮಾನ್ ( ಅಬ್ಬುವಾಕ) ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ, ಅಸರ್ ನಮಾಝ್ ಬಳಿಕ ಬೆಳ್ತಂಗಡಿ ದಾರುಸ್ಸಲಾಮ್ ಎಜುಕೇಶನ್ ಸೆಂಟರ್ ನ ಅಧ್ಯಕ್ಷರಾದ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಅವರ ನೇತೃತ್ವದಲ್ಲಿ ಶಂಸುಲ್ ಉಲಮಾ ಮೌಲಿದ್ ಹಾಗೂ ಶೈಖುನಾ ತೊಟ್ಟಿ ಉಸ್ತಾದ್ ಅನುಸ್ಮರಣೆ ‘ ನಡೆಯಲಿದೆ ಎಂದು ತಿಳಿಸಿದರು.

ಮಗರಿಬ್ ನಮಾಝ್ ಬಳಿಕ ನಡೆಯಲಿರುವ ಆದರ್ಶ ಮಹಾ ಸಮ್ಮೇಳನವನ್ನು ದ.ಕ.ಖಾಝಿ ಹಾಗೂ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ತ್ವಾಖಾ ಅಹ್ಮದ್ ಅಲ್ ಅಝಹರಿ ಉಸ್ತಾದ್ ಅವರು ಉದ್ಘಾಟಿಸಲಿದ್ದಾರೆ. ಜಂಇಯ್ಯತುಲ್ ಮುಅಲ್ಲಿಮೀನ್ ಮೂಡುಬಿದಿರೆ ರೇಂಜ್ ಅಧ್ಯಕ್ಷರಾದ ಸಯ್ಯಿದ್ ಅಕ್ರಂ ಅಲಿ ತಂಙಳ್ ರಹ್ಮಾನಿ ಅವರು ದುವಾ ನೆರವೇರಿಸಲಿದ್ದು ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಮುಹಮ್ಮದ್ ಶರೀಫ್ ದಾರಿಮಿ ಸ್ವಾಗತಿಸಲಿದ್ದಾರೆ.

ಬಳಿಕ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿಯಾದ ಶೈಖುನಾ ಉಮರ್ ಫೈಝಿ ಮುಕ್ಕಂ ಹಾಗೂ ದಾರುರ್ರಹ್ಮಾನ್ ಎಸ್ ಎನ್ ಇ ಸಿ ಕಾಲೇಜಿನ ಪ್ರಾಂಶುಪಾಲರಾದ ಸಲಾಹುದ್ದೀನ್ ಫೈಝಿ ವಲ್ಲಪ್ಪುಝ ಅವರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಉವೈಸ್ ಮದನಿ ಅಲ್ ಅಝ್ಹರಿ ತೋಕೆ ಅವರು ಕನ್ನಡ ಪ್ರಭಾಷಣ ಮಾಡಲಿದ್ದು ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ ಹಾಗೂ ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್ ಅವರು ಅನುಗ್ರಹ ಪ್ರಭಾಷಣ ಮಾಡಲಿದ್ದಾರೆ. ಹಲವು ಮಂದಿ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಸುಮಾರು ಮೂರು ಸಾವಿರ ಜನರು ಸೇರುವ ನಿರೀಕ್ಷೆಯಿದೆ ಎಂದವರು ತಿಳಿಸಿದರು.

ಎಸ್.ಎನ್.ಇ.ಸಿ‌.ರಾಜ್ಯಾಧ್ಯಕ್ಷರಾದ ಸಯ್ಯಿದ್ ಅಕ್ರಂ ಅಲಿ ತಂಙಳ್, ಸ್ವಾಗತ ಸಮಿತಿಯ ಗೌರವ ಸಲಹೆಗಾರರಾದ ಅಬ್ದುರ್ರಹ್ಮಾನ್, ಪ್ರಧಾನ ಕಾರ್ಯದರ್ಶಿ ಅಶ್ರಫ್ ಮರೋಡಿ, ಉಪಾಧ್ಯಕ್ಷರಾದ ಅಝೀಝ್ ಮಾಲಿಕ್,ಕಾರ್ಯದರ್ಶಿ ಅಬ್ದುಲ್ ಗಫೂರ್, ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ಫಾಯಿಝ್ ಫೈಝಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...