ಸಂಬಾರತೋಟದ ನೂರಾನಿಯ ಜುಮಾ ಮಸೀದಿ ಹಾಗೂ ಸ್ವಲಾಹುದ್ದೀನ್ ಹೈಯರ್ ಸೆಕೆಂಡರಿ ಮದ್ರಸ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Date:

ಸಂಬಾರತೋಟದ ನೂರಾನಿಯ ಜುಮಾ ಮಸೀದಿ ಹಾಗೂ ಸ್ವಲಾಹುದ್ದೀನ್ ಹೈಯರ್ ಸೆಕೆಂಡರಿ ಮದ್ರಸ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಹಾಜಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಮಸೀದಿ ಮುದರ್ರಿಸ್ ಅಬ್ದುರ್ರಝ್ಝಾಕ್ ಅಹ್ಸನಿ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮತ್ತು ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ, ದೇಶದ ಏಕತೆ, ಸೌಹಾರ್ದತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಭವಿಷ್ಯದ ಪೀಳಿಗೆಯಲ್ಲಿ ದೇಶಪ್ರೇಮ, ರಾಷ್ಟ್ರನಿಷ್ಠೆ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಮದ್ರಸ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ದರ್ಸ್ ವಿದ್ಯಾರ್ಥಿಗಳಾದ ರಿಳ್ಪಾನ್, ನೌಫಲ್ ಹಾಗೂ ಶಾಕಿರ್ ಅವರು ಸಂದರ್ಭೋಚಿತವಾಗಿ ಸ್ವಾತಂತ್ರ್ಯೋತ್ಸವ ಹಾಗೂ ದೇಶಪ್ರೇಮದ ಮಹತ್ವವನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಾಫಿಳ್ ಶಿಹಾಬುದ್ದೀನ್ ಅಝ್ಹರಿ, ಸ್ವಾಲಿಹ್ ಅಹ್ಸನಿ ಅಲ್ ಕಾಮಿಲಿ, ಸಿನಾನ್ ಸಅದಿ, ಇಕ್ಬಾಲ್ ಜೌಹರಿ ಹಾಗೂ ಮುಸ್ತಫಾ ಹಮ್ದಾನಿ ಸೇರಿದಂತೆ ಮದ್ರಸ ಹಾಗೂ ಮಸೀದಿಯ ಪದಾಧಿಕಾರಿಗಳು ಮತ್ತು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಮದ್ರಸದ ಸದರ್ ಉಸ್ತಾದರಾದ G.H. ಅಬೂಬಕ್ಕರ್ ಸಖಾಫಿ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

“ಏಕತೆ ನಮ್ಮ ಶಕ್ತಿ, ಸೌಹಾರ್ದತೆ ನಮ್ಮ ಹೆಮ್ಮೆ, ದೇಶಪ್ರೇಮ ನಮ್ಮ ಜವಾಬ್ದಾರಿ” ಎಂಬ ಸಂದೇಶದೊಂದಿಗೆ 80ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...