ಜೆದ್ದಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ಮೂವರು ಉಮ್ರಾ ಯಾತ್ರಿಕರು ಸ್ಥಳದಲ್ಲೇ ಮೃತರಾಗಿದ್ದಾರೆ.

ಸುಮಾರು 40ಕ್ಕೂ ಅಧಿಕ ಉಮ್ರಾ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಈ ಬಸ್ ರಿಯಾದ್ ಸಮೀಪದ ಹೌತ ತಮೀಮ್ ನಿಂದ ಮಕ್ಕಾಗೆ ಪ್ರಯಾಣಿಸುತ್ತಿತ್ತು.
ಬಸ್ ನಲ್ಲಿದ್ದವರೆಲ್ಲಾ ಕೇರಳ ಮೂಲದವರೆಂದು ತಿಳಿದು ಬಂದಿದೆ.


