ಕಂಬಳದಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ ರದ್ದು

Date:

ಮೂಡುಬಿದಿರೆ: ಅವಿಭಜಿತ ಜಿಲ್ಲೆಗಳಲ್ಲಿ ನಡೆಯುವ ಕಂಬಳಗಳಲ್ಲಿ ಸಬ್ ಜ್ಯೂನಿಯರ್ ವಿಭಾಗದ ಸ್ಪಧೆ೯ಗಳನ್ನು ರದ್ದುಗೊಳಿಸಲಾಗಿದೆ.

ಇದರಿಂದಾಗಿ ಕಳೆದ 15 ವರ್ಷಗಳಿಂದ ಯಶಸ್ವಿಯಾಗಿ ಆಯೋಜನೆಗೊಳ್ಳುತ್ತಿದ್ದ ಪಣಪಿಲ ಕಂಬಳದಲ್ಲಿ ಈ ಬಾರಿ ‘ಸಬ್ ಜೂನಿಯರ್’ ವಿಭಾಗದ ಸ್ಪರ್ಧೆ ಮೊಟಕುಗೊಂಡಿದೆ. ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಬಂದಿರುವ ಆದೇಶದ ಮೇರೆಗೆ ಕಾನೂನಿನ ತೊಡಕಿನ ಕಾರಣದಿಂದ ಈ ವಿಭಾಗವನ್ನು ರದ್ದುಗೊಳಿಸಲಾಗಿದೆ ಎಂದು ಪಣಪಿಲ ಕಂಬಳ ಸಮಿತಿ ತಿಳಿಸಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಅಶ್ವಥ್ ಪಣಪಿಲ ಮಾಹಿತಿ ನೀಡಿದ್ದು, ಈ ವರ್ಷ ನೇಗಿಲು ಕಿರಿಯ ಸೇರ್ಪಡೆಗೊಳಿಸಲಾಗಿದೆ. ಉಳಿದಂತೆ ಹಗ್ಗ ಕಿರಿಯ, ಮತ್ತು ವಿಶೇಷವಾಗಿ ನೇಗಿಲು ಹಿರಿಯ ವಿಭಾಗಗಳ ಸ್ಪರ್ಧೆಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನು ಪಾಲನೆಯ ದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಂಬಳಾಭಿಮಾನಿಗಳು ಹಾಗೂ ಕೋಣಗಳ ಯಜಮಾನರು ಸಮಿತಿಯ ನಿರ್ಧಾರಕ್ಕೆ ಸಹಕರಿಸಬೇಕೆಂದು ಸಮಿತಿ ವಿನಂತಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ...

ಬಿಹಾರದಲ್ಲಿ ಬಿಜೆಪಿ ಜಯಭೇರಿ: ಮೂಡುಬಿದಿರೆ ಮಂಡಲದಿಂದ ವಿಜಯೋತ್ಸವ

ಮೂಡುಬಿದಿರೆ : ಬಿಹಾರದಲ್ಲಿ ಬಿಜೆಪಿಯು ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ...

ನ.16: ಪವರ್ ಫ್ರೆಂಡ್ಸ್ ನಿಂದ ಅಂಚೆ ಜನ ಸಂಪಕ೯ ಅಭಿಯಾನ, ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಮೂಡುಬಿದಿರೆ: ಪವರ್ ಫ್ರೆಂಡ್ಸ್ ಬೆದ್ರ ಮತ್ತು ದ.ಕ ಜಿಲ್ಲಾ ಶಾಮಿಯಾನ ಮಾಲಕರ...