ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ

Date:

ಬೆಂಗಳೂರು: ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ “ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ” ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ.

ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಾರ್ಮಿಕರ ಬಗ್ಗೆ ಇರುವ ವಿಶೇಷ ಕಾಳಜಿ ಮತ್ತು ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು ಬಗೆಹರಿಸಲು, ಇತರ ರಾಜ್ಯ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು, ಕೇಂದ್ರ ಸರಕಾರದ ನೂತನ ಕಾರ್ಮಿಕ ಸಂಹಿತೆಯ ಜ್ಯಾರಿಗೆ ಬಗ್ಗೆ ಇರುವ ಅಂಶಗಳನ್ನು ಪರಿಗಣಿಸಿ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿರುವುದು ಗಮನಾರ್ಹ.

ಸಮಾಜ ಸೇವೆ ಮತ್ತು ರಾಜಕೀಯದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಕ್ರಿಯಾಶೀಲ ರಾಜಕಾರಣಿ ರಾಜ್ಯದ ಪ್ರಭಾವಿ ಯುವ ನಾಯಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರತಿಷ್ಟಿತ ತೆಕ್ಕಿಲ್ ಮನೆತನದ ಟಿ.ಎಂ ಶಾಹಿದ್ ತೆಕ್ಕಿಲ್ ರವರು 1987 ರಿಂದ ಸುಳ್ಯ ತಾಲೂಕು ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ದಕ ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ವಕ್ತಾರರಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ,ಹಾಗು ಕೆಪಿಸಿಸಿ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿದ್ದರು.

ಸದಸ್ಯತ್ವ ನೋಂದಣಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನ ನೋಂದಾಯಿಸಿದ್ದು ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು, 2001ರಲ್ಲಿ ರಾಜ್ಯ ಯುವ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ಸರಕಾರದ ನಾರು ಮಂಡಳಿ ಸದಸ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ, ಪ್ರಸ್ತುತ ಸಂಪಾಜೆ ಪೇರಡ್ಕ ಗೂನಡ್ಕ ಮುಹಿಯದ್ಧೀನ್ ಜುಮಾ ಮಸೀದಿಯ ಮತ್ತು ವಲಿಯುಲ್ಲಾಹಿ ದರ್ಗಾ ಶರೀಫ್ ಅಧ್ಯಕ್ಷರಾಗಿ, ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಇದರ ಗೌರವಾಧ್ಯಕ್ಷರಾಗಿ ಹಲವಾರು ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಸಹಕಾರ, ಕೃಷಿ, ಉದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಶಾಹಿದ್ ಅವರು ವಿದ್ಯಾರ್ಥಿ, ಯುವಜನ ಹಾಗು ಇತರ ಹೋರಾಟದಲ್ಲಿ ರಾಜ್ಯಮಟ್ಟದಲ್ಲಿ ಪಾಲ್ಗೊಂಡಿದ್ದು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ವಿವಿಧ ಹಂತದಲ್ಲಿ ಉಸ್ತುವಾರಿಗಳಾಗಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದು ಎನ್ ಎಸ್ ಯು ಐ ನ ಐ ವೈ ಸಿ ಯ ಹಾಗು ಎ ಐ ಸಿ ಸಿ ಯ ವೀಕ್ಷಕರಾಗಿ ಕೇರಳ, ತಮಿಳುನಾಡು,ಆಂಧ್ರ ಪ್ರದೇಶ, ಪೊಂಡಿಛೇರಿ, ಲಕ್ಷದೀಪ್, ಅಂಡಮಾನ್ ನಿಕೋಬರ್ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸ್ತುತ ಹಾಸನ ಜಿಲ್ಲೆಯ ಪಕ್ಷ ಸಂಘಟನೆಯಲ್ಲಿ ದುಡಿಯುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...