ಉಳ್ಳಾಲ: ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ತಲಪಾಡಿ, ಮಸ್ಜುದುಲ್ ಅಬ್ರಾರ್ ಇದರ ಆಶ್ರಯದಲ್ಲಿ ಏಕದಿನ ಸಲಫಿ ಸಮ್ಮೇಳನ ಮತ್ತು ಎರಡನೇ ಸನದು ದಾನ ಕಾರ್ಯಕ್ರಮ ಜ.11 ರಂದು ಅಬ್ರಾರ್ ನಗರ ತಲಪಾಡಿಯಲ್ಲಿ ನಡೆಯಲಿದ್ದು, ಭಾನುವಾರ ಬೆಳಿಗ್ಗೆ 9:30 ರಿಂದ ರಾತ್ರಿ 10:00 ರವರೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಎಸ್.ಕೆ.ಎಸ್.ಎಂ ಯೂತ್ ಕಾರ್ಯದರ್ಶಿ ಶಿಹಾಬ್ ತಲಪಾಡಿ ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮ ಪ್ರಯುಕ್ತ ಭಾನುವಾರ ಬೆಳಿಗ್ಗೆ 9.30 ಕ್ಕೆ ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ತಲಪಾಡಿ ಘಟಕದ ಅಧೀನದ ದಾರುಲ್ ಉಲೂಮ್ ಮಹಿಳಾ ಕಾಲೇಜು ವಿದ್ಯಾರ್ಥಿಗಳ ಮಹಿಳಾ ಸಮಾವೇಶ,ಎರಡನೇ ಸನದುದಾನ, ಅಸರ್ ನಮಾಝ್ ಬಳಿಕ ದ ಅವಾ ಸಮಾವೇಶ, ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.
ಶೇಖ್ ಸುಲ್ತಾನ್ ಸಯೀದ್ ಬಿಲಾಲ್, ಮೌಲವಿ ಅನ್ಸಾರ್ ನನ್ಮಂಡ, ಮೌಲವಿ ಮುನೀರ್ ಮದನಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿ ಗೋಷ್ಠಿಯಲ್ಲಿ ಅಬ್ರಾರ್ ಮಸೀದಿ ಉಪಾಧ್ಯಕ್ಷ ಹಮ್ಮದ್ ಕೆ.ಸಿ ರೋಡ್, ಕಾರ್ಯದರ್ಶಿ ಹುಸೈನ್ ಯಾನೆ ಐಸನ್ ಸಮಿತಿ ಸದಸ್ಯ ರಾದ ಇಬ್ರಾಹಿಂ ಮಾಡೂರು , ಅಬೂಬಕ್ಕರ್ ಕೊಲಂಗರೆ ಉಪಸ್ಥಿತರಿದ್ದರು.


