ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಮನುಸ್ಮೃತಿಯ ಮೇಲಲ್ಲ : ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Date:

ಬೆಂಗಳೂರು : ‘ಭಾರತ ಹಿಂದೂ ರಾಷ್ಟ್ರವೋ, ಜಾತ್ಯತೀತ ರಾಷ್ಟ್ರವೋ ಎನ್ನುವುದು ದೇಶದ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ನೋಂದಣಿ ಇಲ್ಲದ ಆರೆಸ್ಸೆಸ್ ಸಂಘಟನೆಯ ನಾಯಕರು ಹೇಳಿದ ತಕ್ಷಣ ದೇಶ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ತಳಹದಿಯ ಮೇಲೆಯೇ ಹೊರತು ಮನುಸ್ಮೃತಿಯ ಪ್ರತಿಪಾದನೆಯ ಮೇಲಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ ಪೋಸ್ಟ್ ಹಾಕಿರುವ ಅವರು, ‘ಭಾರತದಲ್ಲಿ ಇರುವವರೆಲ್ಲರೂ ಹಿಂದೂಗಳಾದರೇ ಇದೇ ನೆಲದಲ್ಲಿ ವಾಸಿಸುತ್ತಿರುವ ಮುಸ್ಲಿಮ್, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ ಧರ್ಮಗಳನ್ನ ಹಿಂದೂಗಳೆಂದು ಪರಿಗಣಿಸುತ್ತಾರಾ? ಎಂದು ಸ್ಪಷ್ಟಪಡಿಸಲಿ. ಹಿಂದೂ ರಾಷ್ಟ್ರದ ಕಲ್ಪನೆಯೇ ಸ್ವತಃ ಆರೆಸ್ಸೆಸ್‍ಗೆ ಗೊಂದಲ ಇರುವಾಗ ದೇಶವನ್ನು ಹಿಂದೂ ರಾಷ್ಟ್ರವೆಂದು ದಾರಿ ತಪ್ಪಿಸುತ್ತಿರುವುದು ಯಾಕೆ?’ ಎಂದು ಪ್ರಶ್ನಿಸಿದ್ದಾರೆ.‘ಬ್ರಿಟಿಷರ ಪರವಾಗಿದ್ದವರು ಬ್ರಿಟಿಷರ ಕಾಲದಲ್ಲಿ ನೋಂದಣಿಯಾಗದೆ ಇರುವುದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಆದರೆ, ಸಂವಿಧಾನದಡಿಯಲ್ಲಿ ಕಾನೂನಿಗೆ ಗೌರವ ಕೊಟ್ಟು ನೋಂದಣಿ ಮಾಡಿಕೊಳ್ಳದೆ ಕಾನೂನನ್ನೇ ಧಿಕ್ಕರಿಸುತ್ತಿರುವುದು ಯಾಕೆ ಎನ್ನುವುದನ್ನು ದೇಶದ ಜನರಿಗೆ ಉತ್ತರಿಸಲಿ’ ಎಂದು ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

‘ರಾಜಕೀಯವನ್ನು ನಿಯಂತ್ರಿಸುವುದಿಲ್ಲ’ ಎನ್ನುವುದು ಮೋಹನ್ ಭಾಗವತ್‍ರ ಹಸಿ ಹಸಿ ಸುಳ್ಳಿಗೆ ನಿದರ್ಶನ. ರಾಜಕೀಯ ನಿಯಂತ್ರಣ ಇಲ್ಲ ಎಂದಾದರೆ ಬಿಜೆಪಿಯನ್ನು ನಿಯಂತ್ರಿಸುತ್ತಿರುವುದು ಯಾರು?. ಯಾರ ಬಾಲಗೋಂಚಿಯಂತೆ ಬಿಜೆಪಿ ವರ್ತಿಸುತ್ತಿರುವುದು ಜಗತ್ತಿಗೇ ಗೊತ್ತಿರುವ ಸತ್ಯವಲ್ಲವೇ? ಆರೆಸ್ಸೆಸ್ ಮುಖ್ಯಸ್ಥರೇ ಸುಳ್ಳುಗಳನ್ನು ಹೆಣಿಯುವಾಗ, ಸಂಘ ಪರಿವಾರ ಸುಳ್ಳನ್ನು ಹೇಳದೆ ಇರಲು ಸಾಧ್ಯವೇ?’ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...