ಸಂತಾ ಟೋಪಿ ವ್ಯಾಪಾರಿಗಳೊಂದಿಗೆ ಪುಂಡಾಟಿಕೆ ಖಂಡನೀಯ; ಇದು ಸಂಘಪರಿವಾರದ ಜನಾಂಗೀಯ ದ್ವೇಷದ ಪ್ರತಿರೂಪ: ವಿಮೆನ್ ಇಂಡಿಯಾ ಮೂವ್ಮೆಂಟ್

Date:

ದೇಶಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ, ಹಿಂಸೆಯ ಪ್ರಕರಣಗಳ ಪೈಕಿ ಇತ್ತೀಚಿಗೆ ಬೆಂಗಳೂರಿನಲ್ಲಿ ಅಂಧ ಭಕ್ತಿಯ ಪರಾಕಾಷ್ಠೆಗೆ ತಲುಪಿದ ಕೆಲ ಹಿಂದುತ್ವ ಭಯೋತ್ಪಾದಕರು ದೈನಂದಿನ ದುಡಿಮೆಯಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ಬಡ ವ್ಯಾಪಾರಿಗಳೊಂದಿಗೆ ಧರ್ಮ ದ್ವೇಷದ ಅಮಲೇರಿಸಿಕೊಂಡು ಪುಂಡಾಟಿಕೆ ಮೆರೆದಿರುವ ಕ್ರತ್ಯ ತೀರಾ ಅಮಾನುಷವಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಹೇಳಿದರು.


ಜೀವನೋಪಾಯಕ್ಕಾಗಿ ಸಂತಾ ಟೋಪಿ ಮಾರುತ್ತಿದ್ದ ವ್ಯಾಪಾರಿಗಳನ್ನು ಬೆದರಿಸಿ, ವ್ಯಾಪಾರಕ್ಕೆ ನಿರ್ಬಂಧಿಸುವುದು ಭಯೋತ್ಪಾದನಾ ಕೃತ್ಯವಾಗಿದೆ. ಬಿಜೆಪಿ, ಸಂಘಪರಿವಾರದ ಧರ್ಮಾಂಧತೆಯ, ಹಿಂಸಾ ರೂಪಕ ರಾಜಕೀಯ ಯಾವ ರೀತಿ ಸಮಾಜದಲ್ಲಿ ಅರಾಜಕತೆಯನ್ನು ಸ್ರಷ್ಟಿ ಮಾಡುತ್ತಿದೆ ಎಂಬುದಕ್ಕೆ ಪ್ರಸ್ತುತ ಘಟನೆ ಸ್ಪಷ್ಟ ನಿದರ್ಶನವಾಗಿದೆ.


ಇಂತಹ ಸಮಾಜ ಘಾತುಕ ಶಕ್ತಿಗಳು ದೇಶದ ಸೌಹಾರ್ದತೆಗೆ ಮಾರಕವಾಗಿದ್ದು ಮಾತ್ರವಲ್ಲದೆ ದೇಶದ ಕಾನೂನು ಸುವ್ಯವಸ್ಥೆಯ ಮೇಲೆ ದೊಡ್ಡ ಸವಾಲಾಗಿ ಪರಿಣಮಿಸಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಇಂತಹ ಪ್ರಕರಣಗಳಿಂದಾಗಿ ದೇಶದ ಹಿರಿಮೆ, ಘನತೆಗೆ ಭಂಗ ಉಂಟಾಗುತ್ತಿದೆ. ಇಂತಹ ಅಲ್ಪಸಂಖ್ಯಾತ ವಿರೋಧಿ ಜನಾಂಗೀಯ ದ್ವೇಷ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ವಹಿಸಿ ದೇಶದ ಪ್ರತಿಯೊಬ್ಬ ಪ್ರಜೆಯ ಭದ್ರತೆ, ಸುರಕ್ಷತೆಯನ್ನು ಖಾತರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...