ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರಕ್ಕೆ ಶಿಲಾನ್ಯಾಸ

Date:

ದೇರಳಕಟ್ಟೆ: ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರಕ್ಕೆ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶಿಲಾನ್ಯಾಸಗೈದರು.


ಬಳಿಕ ಆಶೀರ್ವಚನ ನೀಡಿದ ಶ್ರೀ ಗಳು ಹಿಂದೂ ಸಮಾಜದ ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಕಾಲಘಟ್ಟದಲ್ಲಿ ನಾವಿರುವಾಗ ತೌಡುಗೋಳಿಯಲ್ಲಿ ನಡೆಯುತ್ತಿರುವಂತಹ ಈ ಕ್ಷೇತ್ರದ ಜೀರ್ಣೋದ್ದಾರ ಮಹತ್ವ ಪಡೆದಿದೆ. ಪ್ರತಿಯೊಬ್ಬರೂ ಈ ಪುಣ್ಯಕಾರ್ಯದಲ್ಲಿ ಕೈ ಜೋಡಿಸಿ ಯಶಸ್ವೀಗೊಳಿಸಲು ಕರೆ ನೀಡಿದರು.


ಉದ್ಯಾವರ ಮಾಡ ಅರಸು ಮಂಜಿಷ್ಣಾರ್ ದೈವದ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಪ್ಪಾಡರು ಮಾತನಾಡಿ ಈ ಕ್ಷೇತ್ರದ ಜೀರ್ಣೋದ್ದಾರ ಕೆಲಸಗಳು ಸಾಂಗವಾಗಿ ನೆರವೇರಿ ಬ್ರಹ್ಮಕಲಶ ನೋಡುವ ಭಾಗ್ಯ ನಮಗೆಲ್ಲರಿಗೂ ಆದಷ್ಟು ಬೇಗ ಸಿಗಲಿ ಎಂದು ಹಾರೈಸಿದರು.


ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ನಿಧಿ ಸಂಚಯದ ಕೂಪನ್ ಗಳನ್ನು ಮಾಣಿಲ ಶ್ರೀ ಗಳು ದಾನಿಗಳಿಗೆ ನೀಡಿ ಬಿಡುಗಡೆ ಮಾಡಿದರು. ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ಅನುವಂಶೀಯ ಮೊಕ್ತೇಸರ ಗೋವಿಂದ ಗುರುಸ್ವಾಮಿ, ವರ್ಕಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಪ್ಪ ಶೆಟ್ಟಿ ಚಾವಡಿಬೈಲು, ನೆತ್ತಿಲ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಪ್ರೇಮಾನಂದ ರೈ ನೆತ್ತಿಲ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...